ಕನ್ನಡಪ್ರಭ ವಾರ್ತೆ, ದಾವಣಗೆರೆ
ನಗರದ ಜಿಎಂಐಟಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಜೀವನವನ್ನು ನಿಮ್ಮ ಮನಸ್ಸಿಗೆ ಬಂದಂತೆ ಅನುಭವಿಸಿ, ಆದರೆ ವ್ಯಸನಗಳ ದಾಸರಾಗಬೇಡಿ. ನಾನೂ ಇದೇ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಳೆಯ ವಿದ್ಯಾರ್ಥಿಯಾಗಿದ್ದೆ ಎಂದು ನೆನಪುಗಳ ಹೊರಹಾಕಿದರು. ಎಂಜಿನಿಯರಿಂಗ್ ಪಠ್ಯವು ಯುಪಿಎಸ್ಸಿ ಮತ್ತು ಕೆಪಿಎಸ್ಸಿಯ ಎಲ್ಲ ಪರೀಕ್ಷೆಗಳಿಗೆ ಪೂರಕವಾಗಿದೆ ಎಂದರು.ಪ್ರೊ. ಸಿ.ವಿ.ಶ್ರೀನಿವಾಸ ಮಾತನಾಡಿ, ಜಿಎಂಐಟಿ ಕಾಲೇಜಿನ ಮೆಕ್ಯಾನಿಕಲ್ ವಿದ್ಯಾರ್ಥಿಗಳು ಅತಿ ಹೆಚ್ಚು ವೇತನ ಪಡೆಯುತ್ತಿದ್ದಾರೆ. ಪದವಿ ಪಡೆದ ನಂತರ ಸರಿಯಾದ ಆಯ್ಕೆಯನ್ನು ಮಾಡಿಕೊಳ್ಳಲು ಎಂಜಿನಿಯರಿಂಗ್ ಪದವಿಯ ಉಪಯೋಗ ಬಳಸಿಕೊಳ್ಳಲು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಡಾ. ಎಸ್.ಬಸವರಾಜಪ್ಪ, ದಿಲೀಪ್ ಕುಮಾರ, ವಿದ್ಯಾರ್ಥಿ ಮುಖಂಡರಾದ ಮಹೇಶ ರೆಡ್ಡಿ, ಎ.ಎಂ. ಭೂಮಿಕ, ಸೃಜನ್, ಅಭಿಷೇಕ್ ಇತರರು ಇದ್ದರು. ಇದೇ ಸಂದರ್ಭದಲ್ಲಿ ಎಲ್ಲ ಸೆಮಿಸ್ಟರ್ಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
- - - -31ಕೆಡಿವಿಜಿ32ಃ:ದಾವಣಗೆರೆ ಜಿಎಂಐಟಿ ಕಾಲೇಜಿನಲ್ಲಿ ಶುಕ್ರವಾರ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಸಮಾರೋಪ ಸಮಾರಂಭವನ್ನು ಅಬಕಾರಿ ಇನ್ಸ್ಪೆಕ್ಟರ್ ಜಿ.ಸಿ.ಬಸವರಾಜ ಉದ್ಘಾಟಿಸಿದರು.