ನವ್ಕೀಸ್ ಕಾಲೇಜಿನಲ್ಲಿ ಎಂಜಿನಿಯರ್‌ಗಳ ದಿನಾಚರಣೆ

KannadaprabhaNewsNetwork |  
Published : Sep 17, 2024, 12:47 AM IST
16ಎಚ್ಎಸ್ಎನ್16 : | Kannada Prabha

ಸಾರಾಂಶ

ಹಾಸನ ನಗರದ ಹೊರವಲಯದ ಕಂದಲಿ ಬಳಿ ಇರುವ ನವ್ಕೀಸ್‌ ಎಂಜನಿಯರಿಂಗ್‌ ಕಾಲೇಜಿನಲ್ಲಿ ಸೆ .15ರಂದು ಎಂಜಿನಿಯರ್‌ಗಳ ದಿನವನ್ನು ಆಚರಿಸಲಾಯಿತು. ಸರ್ ಎಮ್ ವಿಶ್ವೇಶ್ವರಯ್ಯ ನವರ ಜನ್ಮ ದಿನದ ಜ್ಞಾಪಕಾರ್ಥವಾಗಿ ಭಾರತದಾದ್ಯಂತ ರಾಷ್ಟ್ರೀಯ ಎಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದೆ ಮತ್ತು ವಿಶ್ವೇಶ್ವರಯ್ಯನವರ ಪರಿಶ್ರಮದ ಫಲವಾಗಿ ಭಾರತದಲ್ಲಿ ಹಲವಾರು ಅಣೆಕಟ್ಟುಗಳು ನಿರ್ಮಾಣವಾಗಿದ್ದು, ಇದರಿಂದ ಕೃಷಿಗೆ ಹೆಚ್ಚು ಪ್ರಯೋಜನವಾಗಿದೆ. ಅವರು ಸ್ಥಾಪಿಸಿದ ವಿದ್ಯುತ್ ಸ್ಥಾವರಗಳಿಂದ ಇಂದು ನಾವು ವಿದ್ಯುತ್ ಪಡೆಯುತ್ತಿದ್ದೇವೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹೊರವಲಯದ ಕಂದಲಿ ಬಳಿ ಇರುವ ನವ್ಕೀಸ್‌ ಎಂಜನಿಯರಿಂಗ್‌ ಕಾಲೇಜಿನಲ್ಲಿ ಸೆ .15ರಂದು ಎಂಜಿನಿಯರ್‌ಗಳ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎತ್ತಿನಹೊಳೆ ಯೋಜನೆಯ ನಿವೃತ್ತ ಮುಖ್ಯ ಕಾರ್ಯ ನಿರ್ವಾಹಕ ಎಂಜಿನಿಯರ್‌ ಮಲ್ಲೇಶ್ ಎಚ್. ಬಿ ಅವರು ಮಾತನಾಡುತ್ತ '''''''' ಸರ್ ಎಮ್ ವಿಶ್ವೇಶ್ವರಯ್ಯ ನವರ ಜನ್ಮ ದಿನದ ಜ್ಞಾಪಕಾರ್ಥವಾಗಿ ಭಾರತದಾದ್ಯಂತ ರಾಷ್ಟೀಯ ಎಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದೆ ಮತ್ತು ವಿಶ್ವೇಶ್ವರಯ್ಯನವರ ಪರಿಶ್ರಮದ ಫಲವಾಗಿ ಭಾರತದಲ್ಲಿ ಹಲವಾರು ಅಣೆಕಟ್ಟುಗಳು ನಿರ್ಮಾಣವಾಗಿದ್ದು, ಇದರಿಂದ ಕೃಷಿಗೆ ಹೆಚ್ಚು ಪ್ರಯೋಜನವಾಗಿದೆ. ಅವರು ಸ್ಥಾಪಿಸಿದ ವಿದ್ಯುತ್ ಸ್ಥಾವರಗಳಿಂದ ಇಂದು ನಾವು ವಿದ್ಯುತ್ ಪಡೆಯುತ್ತಿದ್ದೇವೆ'''''''' ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡುತ್ತ, ಪಶ್ಚಿಮ ಘಟ್ಟದಿಂದ ಸಮುದ್ರ ಸೇರುವ ಇನ್ನೂರು ಟಿಎಂಸಿ ನೀರಿನಲ್ಲಿ ಕೇವಲ ಇಪ್ಪತ್ತು ಟಿಎಂಸಿ ನೀರನ್ನು ಮೋಟಾರುಗಳ ಮೂಲಕ ಮೇಲೆತ್ತಿ ನೀರಿನ ಅಭಾವ ಇರುವ ಏಳು ಜಿಲ್ಲೆಗಳಿಗೆ ಪೂರೈಸಲಾಗುವುದೆಂದು ತಿಳಿಸಿದರು. ಈ ಯೋಜನೆಯಿಂದ 352 ಕೆರೆಗಳನ್ನು ತುಂಬಿಸಲಾಗುತ್ತಿದ್ದು, ಇದರಿಂದಾಗಿ ಜಲ ಮರುಪೂರಣ ಕೆಲಸ ನೆಡೆಯಲಿದೆ ಎಂದರು. ಈ ಯೋಜನೆಯ ಹದಿನಾಲ್ಕು ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲಾಗುವುದು ಎಂದರು.

ಗೌರವ ಅತಿಥಿಗಳಾಗಿ ಆಗಮಿಸಿದ್ದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ತಿರುಮಲೇಶ್ ಅವರು ಯೋಜನೆಯ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಮ್ ವೇಣುಗೋಪಾಲ್ ರಾವ್ ಅವರು ಇಂತಹ ಯೋಜನೆಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಹೆಚ್ಚು ಪ್ರಯೋಜನ ಪಡೆಯಬೇಕಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ