ಬದುಕು ಕಟ್ಟಿಕೊಳ್ಳಲು ಇಂದು ಇಂಗ್ಲಿಷ್ ಭಾಷೆ ಅನಿವಾರ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯ

KannadaprabhaNewsNetwork |  
Published : Jul 13, 2025, 01:18 AM IST
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿದ್ಯಾರ್ಥಿಗಳ ವಿವಿಧ ಸಂಘಗಳ ಉದ್ಘಾಟನೆ ನೆರವೇರಿಸಿ  ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ  ಅಧ್ಯಕ್ಷ ಕೆ ಎಂ ಶಿವಲಿಂಗೇಗೌಡ ಮಾತನಾಡಿದರು | Kannada Prabha

ಸಾರಾಂಶ

ಈ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದ್ದು, ದೊರಕಿಸಿ ಕೊಡುವಂತೆ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ನೂತನವಾಗಿ ಬಂದಿರುವ ಪ್ರಾಂಶುಪಾಲರು ಆಸಕ್ತಿ ಹೊಂದಿದ್ದಾರೆ. ಹೆಚ್ಚುವರಿ ಕೊಠಡಿ ಮತ್ತು ಒಂದು ವೇದಿಕೆ ಅಗತ್ಯವೂ ಇದೆ ಎಂಬುದನ್ನು ಅರಿತಿದ್ದೇನೆ, ನಿರ್ಮಿಸಿ ಕೊಡುವ ಪ್ರಯತ್ನವನ್ನು ಮಾಡುವುದಾಗಿ ಅವರು ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಕನ್ನಡದಲ್ಲಿ ವ್ಯಾಸಂಗ ಮಾಡಿಕೊಂಡು ಹೋದರೆ ವಿದೇಶದಲ್ಲಿ ನೌಕರಿ ಕೊಡುತ್ತಾರೆಯೇ? ಮಾತೃಭಾಷೆ ಕಲಿಯಬೇಕು, ಆದರೆ ಬದುಕು ಕಟ್ಟಿಕೊಳ್ಳಲು ಇಂದು ಇಂಗ್ಲಿಷ್ ಭಾಷೆ ಅನಿವಾರ್ಯ, ಇದನ್ನು ಖಾಸಗಿ ವಿದ್ಯಾ ಸಂಸ್ಥೆಗಳು ಅರಿತು ನಡಿಯುತ್ತಿವೆ, ಹಾಗಾಗಿ ಪೋಷಕರು ಖಾಸಗಿ ಶಾಲೆಗಳತ್ತ ಹೋಗುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ. ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿದ್ಯಾರ್ಥಿಗಳ ವಿವಿಧ ಸಂಘಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುವ ಅಗತ್ಯತೆ ಇದೆ, ಇಂದು ಪ್ರತಿಭಾವಂತರನ್ನು ನಾವು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ದೇಶದ ಪ್ರತಿಭೆಗಳು ವಿದೇಶಕ್ಕೆ ತೆರಳುತ್ತಿವೆ, ಅಂಥವರಿಗೆ ಸೂಕ್ತ ಅವಕಾಶ ಕಲ್ಪಿಸಿ ಕೊಡಬೇಕಾದದ್ದು ನಮ್ಮ ಕರ್ತವ್ಯ ಎಂದರು.

ಈ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದ್ದು, ದೊರಕಿಸಿ ಕೊಡುವಂತೆ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ನೂತನವಾಗಿ ಬಂದಿರುವ ಪ್ರಾಂಶುಪಾಲರು ಆಸಕ್ತಿ ಹೊಂದಿದ್ದಾರೆ. ಹೆಚ್ಚುವರಿ ಕೊಠಡಿ ಮತ್ತು ಒಂದು ವೇದಿಕೆ ಅಗತ್ಯವೂ ಇದೆ ಎಂಬುದನ್ನು ಅರಿತಿದ್ದೇನೆ, ನಿರ್ಮಿಸಿ ಕೊಡುವ ಪ್ರಯತ್ನವನ್ನು ಮಾಡುವುದಾಗಿ ಅವರು ಭರವಸೆ ನೀಡಿದರು.

ಇತ್ತೀಚಿಗಷ್ಟೇ ಈ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರೇಣುಕಾರಾಧ್ಯ ಅವರನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು,

ಕಾಲೇಜು ಸಮಿತಿ ಉಪಾಧ್ಯಕ್ಷ ಬಿ. ಎಸ್. ಸೇತುರಾಮ್, ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದೆ ಎಂಬುದನ್ನು ಪುನರ್ ಮನವಿ ಮಾಡಿದರು ಹಾಗೂ ಕಾಲೇಜಿನ ಕಿರು ಪರಿಚಯವನ್ನು ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪರಮಶಿವಪ್ಪ, ಕಾಲೇಜಿನ ಅಭಿವೃದ್ಧಿಗೆ ತಾವು ಹೆಚ್ಚಿನ ಆಸಕ್ತಿ ವಹಿಸುವುದಾಗಿ ಹೇಳಿದ ಅವರು, ಮೂಲಭೂತ ಸೌಕರ್ಯಗಳ ಅವಶ್ಯಕತೆ ಕುರಿತಂತೆ ಪ್ರಸ್ತಾಪಿಸಿ ಮನವಿಯನ್ನು ಸಹ ಸಲ್ಲಿಸಿದರು.

ಕಾಲೇಜು ಪ್ರತಿವರ್ಷ ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿದ್ದು, ಇನ್ನೂ ಹೆಚ್ಚಿನ ರೀತಿ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.

ಕಾಲೇಜು ಹಿರಿಯ ಉಪನ್ಯಾಸಕ ಗಂಗಾಧರಪ್ಪ ಕಾಲೇಜಿನ ಇತಿಹಾಸವನ್ನು ಸಭೆ ಮುಂದಿಟ್ಟರು.

ಉಪನ್ಯಾಸಕ ಗೋವಿಂದರಾಜ ಕಾರ್ಯಕ್ರಮ ನಿರ್ವಹಿಸಿಕೊಟ್ಟರು.

ಸರಕಾರಿ ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಗದೀಶ ಹಿರೇಮಠ್, ಉಪನ್ಯಾಸಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು