ಸಮೀಪದ ಚೌಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಆಂಗ್ಲ ಮಾಧ್ಯಮದ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಗ್ರಾ.ಪಂ. ಸದಸ್ಯ ಮಹೇಶ್ ಚಾಲನೆ ನೀಡಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಮೀಪದ ಚೌಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಆಂಗ್ಲ ಮಾಧ್ಯಮದ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಗ್ರಾ.ಪಂ. ಸದಸ್ಯ ಮಹೇಶ್ ತಿಮ್ಮಯ್ಯ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಶಾಲಾ ವ್ಯಾಪ್ತಿಯ ಗ್ರಾಮಗಳ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವ ಮೂಲಕ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಬೇಕು. ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ಪಂಚಾಯಿತಿ ಸದಸ್ಯರಾದ ಜಯಲಕ್ಷ್ಮಿ, ಪ್ರವೀಣ್, ಭಾರತೀಯ ಯುವಕ ಸಂಘದ ಮೋಹನ್, ಕೃಷ್ಣಮೂರ್ತಿ, ಶ್ರೀಕಾಂತ್, ಗಾಂಧಿನಗರ ಮಾರಿಯಮ್ಮ ದೇವಾಲಯ ಸಮಿತಿ ಉಪಾಧ್ಯಕ್ಷ ಗೋಪಿ, ಕಾರ್ಯದರ್ಶಿ ಶಶಿಕುಮಾರ್, ಮುಖ್ಯೋಪಾಧ್ಯಾಯ ರಾಜಣ್ಣ, ಸಹ ಶಿಕ್ಷಕರು, ಪೋಷಕರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.