ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಎಸ್ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಬೂತ್ ಮಟ್ಟದ ಅಧಿಕಾರಿಗಳು, ಬಿಎಲ್ಒ- 2ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಜುಲೈ 29ರವರೆಗೆ ನಡೆಯುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಅವಧಿಯಲ್ಲಿ ಮನೆಮನೆಗೆ ಭೇಟಿ ನೀಡಿ ಪ್ರತಿಯೊಂದು ಕುಟುಂಬದ ಸದಸ್ಯರನ್ನು ಭೇಟಿ ಮಾಡಬೇಕು. ಅರ್ಹ ಮತದಾರರ ಹೆಸರನ್ನು ಅಗತ್ಯ ದಾಖಲೆಗಳೊಂದಿಗೆ ಮತದಾರರ ಪಟ್ಟಿಗೆ ಸೇರಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.ಪ್ರಜಾಪ್ರಭುತ್ವದ ಬಲವಾದ ಅಡಿಪಾಯವೇ ಮತದಾನ. ಮತದಾನದ ಹಕ್ಕು ಸುರಕ್ಷಿತವಾಗಿರಬೇಕಾದರೆ ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬರ ಮಾಹಿತಿಯೂ ನಿಖರವಾಗಿರಬೇಕು. ಹೀಗಾಗಿ ಸಂಬಂಧಿಸಿದ ಅರ್ಜಿ ನಮೂನೆಗಳನ್ನು ನೀಡಿ ಅಗತ್ಯ ಮಾಹಿತಿಯನ್ನು ಪಡೆದು ಪರಿಷ್ಕರಣೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.
ಯಾವುದೇ ಮಾಹಿತಿ ಅಥವಾ ನಿಯಮಗಳ ಕುರಿತು ಸಂದೇಹವಿದ್ದರೆ ಸಂಬಂಧಿಸಿದ ಮತದಾರರ ನೋಂದಣಿ ಅಧಿಕಾರಿ ಅಥವಾ ಚುನಾವಣಾ ಇಲಾಖೆಯ ಅಧಿಕೃತ ವ್ಯವಸ್ಥೆಯ ಮೂಲಕ ಮಾಹಿತಿ ಪಡೆದು ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಚೇತನ ಯಾದವ್, ತಾಪಂ ಇಒ ಚಂದ್ರು, ಸಿಡಿಪಿಒ ಕಮಲೇಶ್ವರ್, ಮುಖ್ಯಾಧಿಕಾರಿ ರಾಜಣ್ಣ, ತಾಪಂ ನೋಡಲ್ ಅಧಿಕಾರಿ ತ್ರಿವೇಣಿ, ಮತದಾರರ ಪಟ್ಟಿಯ ತರಬೇತುದಾರರಾದ ಮಮತಾ ಸೇರಿದಂತೆ ಕಂದಾಯ, ಕೃಷಿ, ಗ್ರಾಪಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.