ಕುಷ್ಟಗಿ: ಮುಂಗಾರು ಹಂಗಾಮಿನ ಬಿತ್ತನೆ ಸಮಯದಲ್ಲಿ ರೈತರಿಗೆ ಕಳಪೆ ಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟ ಮಾಡುವದು ಹಾಗೂ ಹೆಚ್ಚಿನ ದರ ವಸೂಲಿ ಮಾಡುತ್ತಿರುವದು ಕಂಡು ಬಂದಲ್ಲಿ ಅಂಗಡಿಕಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೂಚಿಸಿದರು.
ಅಂಗನವಾಡಿ ಕಟ್ಟಡಗಳಿಗೆ ಜಾಗ ದೊರಕದೆ ಇದ್ದಲ್ಲಿ ಸರ್ಕಾರಿ ಶಾಲೆಯಲ್ಲಿ ಪಡೆದುಕೊಳ್ಳಲು ಆದೇಶ ಇರುತ್ತದೆ. ಸ್ಥಳ ಪರೀಶಿಲನೆ ಮಾಡುವ ಮೂಲಕ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು ಇದಕ್ಕೆ ಶಿಕ್ಷಣ ಇಲಾಖೆ ಸಹಕಾರ ನೀಡಬೇಕು ಎಂದು ಸಿಡಿಪಿಒ ಯಲ್ಲಮ್ಮ ಹಂಡಿ ಹಾಗೂ ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ದಾವಲಸಾಬ್ ವಾಲಿಕಾರಗೆ ಸೂಚಿಸಿದರು. ತಾಲೂಕಿನಲ್ಲಿ ಬಾಕಿ ಇರುವ ಸರ್ಕಾರಿ ಕಟ್ಟಡಗಳನ್ನು ಪೂರ್ಣಗೊಳಿಸಬೇಕು ಎಂದು ಪಂಚಾಯತ್ ರಾಜ್ ಉಪವಿಭಾಗದ ಎಇಇ ಧರಣೇಂದ್ರ ಅವರಿಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಾಸ್ಟೇಲ್ ಸ್ವಚ್ಚತೆಯ ಬಗ್ಗೆ ಗಮನ ಕೊಡಬೇಕು ಹಾಗೂ ಎಲ್ಲ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಇರಬೇಕು. ಸೌಲಭ್ಯಗಳ ಕೊರತೆಯಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದರು.ಆರ್ಡಬ್ಲ್ಯೂಎಸ್ ಅಧಿಕಾರಿಗಳು ಜೆಜೆಎಂ ಕಾಮಗಾರಿಯಲ್ಲಿ ಅನೇಕ ತಪ್ಪು ಮಾಡುತ್ತಿದ್ದು, ತಾಲೂಕಿನಲ್ಲಿ ಸುಮಾರು 14 ಹಳ್ಳಿಗಳಿಗೆ ನೀರು ಹೋಗುತ್ತಿಲ್ಲ ಗಂಭೀರವಾಗಿ ಪರಿಗಣಿಸುವ ಮೂಲಕ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಹಾಗೂ ಎಲ್ಲ ಅಂಗನವಾಡಿ, ಶಾಲೆ ಹಾಗೂ ಆರೋಗ್ಯ ಕೇಂದ್ರಗಳಿಗೆ ನೀರಿನ ಸರಬರಾಜು ಮಾಡಬೇಕು ಎಂದರು.
ತಾಪಂ ಇಒ ಪಂಪಾಪತಿ ಹಿರೇಮಠ ಮಾತನಾಡಿ, ಜೆಜೆಎಂ ಕಾಮಗಾರಿಯ ನಾಲ್ಕೈದು ಗ್ರಾಮಗಳಲ್ಲಿ ಪೈಪ್ ಡ್ಯಾಮೇಜಾಗಿದ್ದು, ಈ ಕುರಿತು ಕ್ರಮ ಕೈಗೊಂಡಿಲ್ಲ ಯಾಕೆ ಆದಷ್ಟು ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು ಇಲ್ಲವಾದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕಾಗುತ್ತದೆ ಎಂದರು.
84 ಮಕ್ಕಳಲ್ಲಿ ಅಪೌಷ್ಟಿಕತೆ
ಕರ್ತವ್ಯ ಲೋಪದ ಆರೋಪ