ಕನ್ನಡಪ್ರಭ ವಾರ್ತೆ ಕೋಲಾರ ರೈತರು ತಮ್ಮ ಜಮೀನುಗಳ ಮಾಹಿತಿ ಫ್ರೂಟ್ಸ್ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಸೂಚಿಸಿದರು.ನಗರದ ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರದ ಪರಿಹಾರ ಮೊತ್ತಗಳನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲು ಫ್ರೂಟ್ ತಂತ್ರಾಂಶ ಬಳಸಲಾಗುತ್ತಿದೆ ಎಂದರು.ತಂತ್ರಾಂಶದಲ್ಲಿ ಮಾಹಿತಿ ದಾಖಲಿಸಿ
ಬಗರಹುಕುಂ ಅಡಿ ದುರ್ಬಳಕೆ ತಡೆಗಟ್ಟಲು ಮಂಜೂರಾತಿಗೆ ಡಿಜಿಟಲ್ ಸಹಿಗೆ ಅವಕಾಶ ಮಾಡಿಕೊಟ್ಟು ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ. ಈ ಹಿಂದೆ ನೀಡಿದ ಸಾಗುವಳಿ ಚೀಟಿ ನೀಡಿದ ನೈಜತೆಯ ಬಗ್ಗೆ ರಾಜ್ಯದಲ್ಲಿ ಲಕ್ಷಾಂತರ ಪ್ರಕಟಣಗಳು ನ್ಯಾಯಾಲಯದಲ್ಲಿವೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಡಿಜಿಟಲಿಕರಣ ಮಾಡಲಾಗುತ್ತಿದೆ ಎಂದರು. ಸರ್ಕಾರಿ ಜಮೀನುಗಳ ರಕ್ಷಣೆಗಾಗಿ ಆ್ಯಪ್ ಸಿದ್ಧಪಡಿಸಲಾಗಿದೆ. ಸರ್ಕಾರಿ ಜಮೀನುಗಳನ್ನು ಆಪ್ ಮೂಲಕ ಡಾಟಾಬೇಸನ್ನು ಸಿದ್ಧಪಡಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಾಗೆಗಳ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಭೂಮಿ ಒತ್ತುವರಿ ಆಗಿದೆಯೋ, ಇಲ್ಲವೋ ಎಂಬದುನ್ನು ಪರಿಶೀಲನೆ ನಡೆಸಿ ಆಪ್ ಮೂಲಕ ಆ ಸ್ಥಳದಿಂದಲೇ ಧೃಡೀಕರಿಸಿ ವರದಿಯನ್ನು ಆಪ್ಲೊಡ ಮಾಡಬೆಕು ಎಂದರು. ಒಂದು ವೇಳೆ ಸರಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಆಪ್ ಬಳಸಿ ಆನಲೈನ್ ಮೂಲಕವೇ ತಹಶೀಲ್ದಾರರಿಗೆ ವರದಿ ನೀಡಬೇಕು. ಈ ಪ್ರಕ್ರಿಯೆಯಿಂದ ಸರಕಾರಿ ಭೂ-ಕಬಳಿಕೆ ನಿಯಂತ್ರಣಗೊಳ್ಳಲಿದೆ ಎಂದರು.
ಇ-ಆಫೀಸ್ ವ್ಯವಸ್ಥೆ ಅಳವಡಿಕೆ ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ-ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಇ-ಆಫೀಸ ಮೂಲಕವೇ ಕಡತಗಳ ಚಲನೆಯಾಗಬೇಕು. ಇದರಿಂದ ವಿಳಂಬಕ್ಕೆ ವಿದಾಯ ದೊರೆಯುತ್ತದೆ. ನಮ್ಮ ಸರ್ಕಾರದ ಜನಪರ ಹಾಗೂ ಪಾರದರ್ಶಕ ಆಡಳಿತದ ಉದ್ದೇಶ ಸಾಕಾರಗೊಳ್ಳಲಿದೆ ಎಂದರು.ದಾಖಲೆಗಳ ಡಿಜಿಟಲಿಕರಣದಾಖಲೆಗಳ ಕೊಠಡಿಯಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಶಾಶ್ವತವಾಗಿ ದಾಖಲೆಗಳನ್ನು ಉಳಿಸಲು ಡಿಜಿಟಲಿಕರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ದಾಖಲೆಗಳ ಸೂಕ್ತ ರಕ್ಷಣೆಗೆ ಉತ್ತಮ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ ರಕ್ಷಣೆ ಮಾಡುತ್ತೇವೆ. ಜನಸಾಮಾನ್ಯರಿಗೆ ಸಲೀಸಾಗಿ ಅವರಿಗೆ ಸಂಬಂಧಿಸಿದ ದಾಖಲೆಗಳು ಸಿಗುವಂತೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು. ಈ ವೇಳೆ ಎಡಿಸಿ ಮಂಗಳ, ಎಸಿ ಡಾ.ಮೈತ್ರಿ ಇದ್ದರು.