ರಾಮನಗರ: ತೀವ್ರ ಜಿದ್ದಾಜಿದ್ದಿನಿಂದಾಗಿ ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣಾ ಕಣದಲ್ಲಿ ಧೂಳೆಬ್ಬಿಸಲು ದೀಪಾವಳಿ ಹಬ್ಬದ ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ - ಬಿಜೆಪಿ ಮಿತ್ರ ಪಕ್ಷಗಳ ಘಟಾನುಘಟಿ ನಾಯಕರು ಎಂಟ್ರಿ ಕೊಡುತ್ತಿದ್ದಾರೆ.
ರಣರಂಗಕ್ಕೆ 10 ಸಚಿವರು, 30 ಶಾಸಕರ ಪಡೆ:
ಈಗಾಗಲೇ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಕೈ ಬಲಪಡಿಸುವ ವಿಶ್ವಾಸ ತುಂಬಿ ಹೋಗಿದ್ದಾರೆ. ಸೈನಿಕ ಯೋಗೇಶ್ವರ್ ಪರವಾಗಿ ಮತಬೇಟೆಗಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ 10 ಸಚಿವರು, 30 ಶಾಸಕರ ಪಡೆ ಬಂದಿಳಿಯಲಿದೆ. ಇವರೊಂದಿಗೆ ಪಕ್ಷದ ಮುಂಚೂಣಿ ಘಟಕಗಳಪದಾಧಿಕಾರಿಗಳಿಗೂ ಜವಾಬ್ದಾರಿ ನೀಡಲಾಗಿದೆ. ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಚುನಾವಣಾ ಕಣದಲ್ಲಿ ತೊಡಗಲಿದ್ದಾರೆ.
ಕೈ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ:
ಬಾಕ್........................
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಜಿ.ಸಿ.ಚಂದ್ರಶೇಖರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ , ಶಾಸಕ ತನ್ವೀರ್ ಸೇಟ್ , ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಸಂಸದ ಡಿ.ಕೆ.ಸುರೇಶ್ ಹೆಗಲಿಗೆ ವಹಿಸಲಾಗಿದೆ.
(ಮಲ್ಲಿಕಾರ್ಜುನ ಖರ್ಗೆ,ಮಗ್ಶಾಟ್ ಫೋಟೋ)
ಪುತ್ರನ ಗೆಲ್ಲಿಸಿಕೊಳ್ಳಲು ತಂದೆಯೇ ಸಾರಥ್ಯ:
ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಮಾಜಿ ಪ್ರಧಾನಿ ದೇವೇಗೌಡರು ಅಖಾಡಕ್ಕೆ ಇಳಿಯಲಿದ್ದಾರೆ. ಆನಂತರ ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಡಾ.ಕೆ.ಸುಧಾಕರ್ ಹಾಗೂ ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಹಾಲಿ ಶಾಸಕರು ಕ್ಷೇತ್ರದಲ್ಲಿ ನಿಖಿಲ್ ಪರ ಮತ ಶಿಕಾರಿ ನಡೆಸಲಿದ್ದಾರೆ. ಉಪ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ ಒಂದೊಂದು ಮತವೂ ನಿರ್ಣಾಯಕ ಆಗಿರುವ ಕಾರಣ ಕೇಂದ್ರ ಸಚಿವ ಕುಮಾರಸ್ವಾಮಿ ಎಲ್ಲ ವರ್ಗದ ಮತಗಳನ್ನು ಸೆಳೆಯಲು ತಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಅದರಲ್ಲೂ ತಮ್ಮ ಪಕ್ಷದಿಂದ ದೂರ ಸರಿದಿರುವ ಅಲ್ಪಸಂಖ್ಯಾತರ ಮತಗಳನ್ನು ಗಿಟ್ಟಿಸಿಕೊಳ್ಳಲು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ಪಕ್ಷದಲ್ಲಿನ ಅಲ್ಪಸಂಖ್ಯಾತ ನಾಯಕರಾದ ಜಫ್ರುಲ್ಲಾ ಖಾನ್, ಬಿ.ಎಂ.ಫಾರುಕ್ , ಇಮ್ರಾನ್ ಪಾಷ ಅವರನ್ನು ಬಳಸಿಕೊಂಡು ಮುಸ್ಲಿಮರ ಮತ ಸೆಳೆಯುತ್ತಿದ್ದಾರೆ. ಇದೇ ರೀತಿಯಲ್ಲಿ ಆಯಾಯ ಸಮುದಾಯದ ನಾಯಕರನ್ನೇ ಬಳಸಿಕೊಂಡು ಮತಬೇಟೆಗೆ ಪ್ಲಾನ್ ಮಾಡಿಕೊಂಡಿದ್ದಾರೆ.
ಬಾಕ್ಸ್..............ಜೆಡಿಎಸ್ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ:
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಲು ಜೆಡಿಎಸ್ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಈ ಪಟ್ಟಿಯಲ್ಲಿ ಜಿ.ಟಿ.ದೇವೇಗೌಡ ಅವರ ಹೆಸರನ್ನು ಕೈ ಬಿಟ್ಟಿರುವುದು ಕುತೂಹಲ ಮೂಡಿಸಿದೆ.ಎಂ.ಮಲ್ಲೇಶ್ ಬಾಬು, ಸಿ.ಬಿ.ಸುರೇಶ್, ಎಚ್.ಕೆ.ಕುಮಾರಸ್ವಾಮಿ, ಬಂಡೇಪುರ ಕಾಶಂಪೂರ್, ಹನಮಂತಪ್ಪ ವೈ ಅಲ್ಕೋಡ್, ವೆಂಕಟರಾವ್ ನಾಡಗೌಡ, ಸಾ.ರಾ.ಮಹೇಶ್, ಎ.ಮಂಜು, ಜಿ.ಡಿ.ಹರೀಶ್ ಗೌಡ, ಶರಣಗೌಡ ಕಂದಕೂರ್ , ಟಿ.ಎ.ಶರವಣ, ಎಸ್.ಎಲ್.ಭೋಜೇಗೌಡ, ಸಮೃದ್ಧಿ ಮಂಜುನಾಥ್, ಅನಿತಾ ಕುಮಾರಸ್ವಾಮಿ, ಸಿ.ಎಸ್.ಪುಟ್ಟರಾಜು, ಎಂ.ಅಶ್ವಿನ್ ಕುಮಾರ್, ಡಿ.ಸಿ.ತಮ್ಮಣ್ಣ, ಕೆ.ಟಿ.ಶ್ರೀಕಂಠೇಗೌಡ ಸೇರಿ 40 ಮಂದಿ ಸ್ಟಾರ್ ಪ್ರಚಾರಕರು ಪಟ್ಟಿಯಲ್ಲಿದ್ದಾರೆ.
(ದೇವೇಗೌಡ ಮಗ್ಶಾಟ್)(ಚನ್ನಪಟ್ಟಣ ನಕ್ಷೆ, ಯೋಗೇಶ್ವರ್ ಮತ್ತು ನಿಖಿಲ್
ಮಗ್ಶಾಟ್ ಫೋಟೋಸ್)