ಕನ್ನಡಪ್ರಭ ವಾರ್ತೆ ಬಂಟ್ವಾಳ
ಮಾಣಿ ವಲಯದ ಶೌರ್ಯ ತಂಡದ ಸದಸ್ಯರು, ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಮಾತನಾಡಿ, ಹಸಿರು ನಮ್ಮೆಲ್ಲರ ಉಸಿರು ಮುಂದಿನ ಪೀಳಿಗೆಗೆ ಮರ-ಗಿಡಗಳನ್ನು ಬೆಳೆಸಿ ಪೋಷಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವೆಂದು ಎಂದರು.ಈ ಸಂದರ್ಭದಲ್ಲಿ ಪರಿಸರ ಬಗ್ಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರನ್ನು ಅಭಿನಂದಿಸಲಾಯಿತು
ಕಾರ್ಯಕ್ರಮದಲ್ಲಿ ಮಾಣಿ ವಲಯದ ಶೌರ್ಯ ತಂಡದ ಸಂಯೋಜಕ ಸತೀಶ್, ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷ ಹರೀಶ್ ಕುಲಾಲ್, ಶೌರ್ಯ ತಂಡದ ಸದಸ್ಯರು, ಒಕ್ಕೂಟ ಸೇವಾ ಪ್ರತಿನಿಧಿ ಪುಷ್ಪ, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಮುಖ್ಯಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿದರು. ಶಿಕ್ಷಕಿ ದೀಕ್ಷಾ ವಂದಿಸಿದರು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಐಸಮ್ಮ ಸಹಕರಿಸಿದರು.