ಕನ್ನಡಪ್ರಭ ವಾರ್ತೆ ಮಂಗಳೂರು
ಜನಸಾಮಾನ್ಯರು ತಮ್ಮ ಬೇಡಿಕೆಗಳ ಪೂರೈಕೆಗಾಗಿ ಭವಿಷ್ಯದ ಬಗ್ಗೆ ಯೋಚಿಸದೇ ಗಿಡ ಮರಗಳನ್ನು ನಾಶಗೊಳಿಸುತ್ತಿದ್ದೇವೆ, ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಯೋಚನೆ ಮಾಡುತ್ತಿಲ್ಲ. ನಾವು ಮರಗಳನ್ನು ನಾಶಗೊಳಿಸುವುದು ಮಾತ್ರವಲ್ಲ ಪ್ರತಿ ಮನೆಯಲ್ಲೂ ಪ್ರತಿಯೊಬ್ಬರು ಗಿಡಮರಗಳನ್ನು ಬೆಳೆಸಬೇಕು. ಪರಿಸರ ದಿನದ ಆಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಬೆಳೆಸಿದ ಗಿಡಗಳನ್ನು ಸಂರಕ್ಷಿಸಬೇಕು. ಎಲ್ಲರೂ ಕೈ ಜೋಡಿಸಿ ಪರಿಸರವನ್ನು ಮುಂದಿನ ಪೀಳಿಗೆಗಾಗಿ ಉಳಿಸಬೇಕು ಎಂದು ಕರೆ ನೀಡಿದರು.
ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್. ಮರಿಯಪ್ಪ ಮಾತನಾಡಿ, ಜಾಗತಿಕ ತಾಪಮಾನವನ್ನು ಸಮತೋಲನದಲ್ಲಿ ಇರಿಸುವಲ್ಲಿ ಪರಿಸರದ ಪಾತ್ರ ಮಹತ್ತರವಾದದ್ದು, ಇಂದು ಗಿಡಮರಗಳ ನಾಶದಿಂದ ಅಂತರ್ಜಲ ಬತ್ತಿ ಹೋಗುತ್ತಿದೆ ಎಂದರು.ಪ್ರತಿ ವರ್ಷವೂ ಅರಣ್ಯ ಇಲಾಖೆಯಿಂದ ಇಂತಹಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಹಾಗೂ ಗಿಡ ಮರಗಳನ್ನು ಬೆಳೆಸುತ್ತೇವೆ. ಆದರೂ ಪ್ರತಿ ವರ್ಷವೂ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿದೆ, ಅಂದರೆ ನಾವು ನಮ್ಮ ಉದ್ದೇಶಗಳಿಗಾಗಿ ಮರ ಗಿಡಗಳನ್ನು ಕಡಿಯುತ್ತಿದ್ದೇವೆ. ಅವುಗಳ ಸಂಖ್ಯೆಯನ್ನು ಸರಿದೂಗಿಸಬೇಕೆಂದರೆ ನಾವು ಪ್ರತಿ ವರ್ಷವೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಸುರತ್ಕಲ್ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ರಾಜೇಂದ್ರ ಕಲ್ಬಾವಿ ಉಪನ್ಯಾಸ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ತಾರನಾಥ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ, ಉಪ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್, ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸಾಮಾಜಿಕ ಅರಣ್ಯ ವಿಭಾಗದ ಸಾಮಾಜಿಕ ಅರಣ್ಯ ವಿಭಾಗದ ಪಿ. ಶ್ರೀಧರ್ ಮತ್ತಿತರರು ಇದ್ದರು.