ಜಿಲ್ಲೆಯ ಎಲ್ಲೆಡೆ ಪರಿಸರ ದಿನಾಚರಣೆ ಸಂಭ್ರಮ

KannadaprabhaNewsNetwork |  
Published : Jun 06, 2026, 01:15 AM IST
ಸಸಸ | Kannada Prabha

ಸಾರಾಂಶ

ಚಿಕ್ಕಮಗಳೂರುವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳ ಕಚೇರಿ ಆವರಣದಲ್ಲಿ ಗಿಡ ನೆಟ್ಟು ಪರಿಸರ ಪ್ರೇಮ ಮೆರೆಯುವುದರೊಂದಿಗೆ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಅಭಿಯಾನಗಳನ್ನು ನಡೆಸಲಾಯಿತು.

ಗಿಡ ನೆಟ್ಟು ಪರಿಸರ ಪ್ರೇಮ ಮೆರೆದ ವಿದ್ಯಾರ್ಥಿ, ಶಿಕ್ಷಕರು । ವಿವಿಧೆಡೆ ಪರಿಸರ ಸಂರಕ್ಷಣೆ ಜಾಗೃತಿ ಅಭಿಯಾನ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳ ಕಚೇರಿ ಆವರಣದಲ್ಲಿ ಗಿಡ ನೆಟ್ಟು ಪರಿಸರ ಪ್ರೇಮ ಮೆರೆಯುವುದರೊಂದಿಗೆ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಅಭಿಯಾನಗಳನ್ನು ನಡೆಸಲಾಯಿತು.

ಶಾಲಾ ಕಾಲೇಜುಗಳಲ್ಲಿ ಮಕ್ಕಳು, ಶಿಕ್ಷಕರು ಸೇರಿ ಗಿಡ ನೆಟ್ಟು ನೀರುಣಿಸಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದು ವಿಶೇಷ ವಾಗಿತ್ತು. ಜಿಲ್ಲೆಯ ಪ್ರತಿ ಗ್ರಾಪಂ ಆವರಣದಲ್ಲಿ ಅಧಿಕಾರಿ ಸಿಬ್ಬಂದಿ ಗ್ರಾಪಂ ಆವರಣದಲ್ಲಿ ಗಿಡನೆಟ್ಟರು.

ಪರಿಸರ ಜಾಗೃತಿ ಜಾಥಕ್ಕೆ ಚಾಲನೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಹಸಿರು ಫೌಂಡೇಶನ್ ಆಶ್ರಯದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ತಾಲೂಕು ಕಚೇರಿ ಮುಂಭಾಗ ಪರಿಸರ ಜಾಗೃತಿ ಜಾಥಕ್ಕೆ ಚಿಕ್ಕಮಗಳೂರಿನ ಶಾಸಕ ಎಚ್‌.ಡಿ.ತಮ್ಮಯ್ಯ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಎಚ್‌.ಡಿ.ತಮ್ಮಯ್ಯ, ಮನುಷ್ಯನ ದುರಾಸೆಯಿಂದ ಪ್ರಕೃತಿ ನಾಶವಾಗುತ್ತಿದೆ. ಕಾಂಕ್ರಿಟ್‌ ಮನೆಗಳ ನಿರ್ಮಾಣ ಮಾಡುತ್ತಿದ್ದರೆ ಪರಿಸರ ಉಳಿಸುವುದು ಹೇಗೆ, ಪ್ರಕೃತಿಯೇ ನಮ್ಮ ದೇವರು, ಹಾಗಾಗಿ ಪರಿಸರ ಉಳಿಸಿ ಬೆಳೆಸಬೇಕು. ಪ್ರಕೃತಿಯಿಂದ ಅಗತ್ಯದಷ್ಟು ಮಾತ್ರ ನಾವು ಪಡೆಯಬೇಕು ಎಂದರು.ಮಾನವನ ಜೀವನಕ್ಕೆ ಅತಿ ಅವಶ್ಯಕವಾದ ಆಮ್ಲಜನಕ ನೀಡುವುದೇ ಪರಿಸರ. ಆದರೆ, ಅರಣ್ಯ ನಾಶ, ವಾಯು ಮಾಲಿನ್ಯ, ಅತಿ ಹೆಚ್ಚು ಪ್ಲಾಸ್ಟಿಕ್ ಬಳಕೆ, ಮಣ್ಣಿನ ಸವಕಳಿ, ಇಂತಹ ಹಲವು ಸಮಸ್ಯೆಗಳನ್ನು ನಾವುಗಳು ಎದುರಿಸುತ್ತಿದ್ದೇವೆ ಎಂದು ಹೇಳಿದರು.ಪ್ರಕೃತಿ ಮೇಲೆ ಹೆಚ್ಚು ಒತ್ತಡ ಬೀಳುತ್ತಿದೆ. ಹಾಗಾಗಿ ಮಳೆಗಾಲ, ಬೇಸಿಗೆ ಹಾಗೂ ಚಳಿಗಾಲದಲ್ಲೂ ಕೂಡ ಬದಲಾವಣೆ ಆಗಿದೆ. ಪ್ರಕೃತಿಯ ಏರುಪೇರು ಕಾಣುತ್ತಿದ್ದೇವೆ. ನಮ್ಮ ಪೂರ್ವಜರು ಪರಿಸರ ಪ್ರಕೃತಿ ದೇವರೆಂದು ಪೂಜೆ ಮಾಡುತ್ತಿದ್ದರು. ಅದನ್ನು ಉಳಿಸುವ ಕೆಲಸ ನಮ್ಮದಾಗಬೇಕು ಎಂದರು.ಪ್ರಪಂಚದಲ್ಲಿ ಇದೇ ರೀತಿಯಲ್ಲಿ ತಾಪಮಾನ ಮುಂದುವರಿದರೆ ನಮ್ಮ ಮುಂದಿನ ಪೀಳಿಗೆಗೆ ಹಸಿರು ಉಳಿಸುವುದು ಹೇಗೆ ಎಂಬ ಬಗ್ಗೆ 1972 ರಲ್ಲಿ ವಿಶ್ವ ಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಚಿಂತನೆ ಮಾಡಿದಾಗ ಪರಿಸರ ಸಂರಕ್ಷಣೆ ಅನಿವಾರ್ಯ ಎಂಬ ಕಾರಣಕ್ಕಾಗಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ. ಇದು, ಜೂನ್ 5ಕ್ಕೆ ಮಾತ್ರ ಸೀಮಿತ ಆಗಬಾರದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ರಾಜ್ಯ ಪರಿಸರ ಮಾಲಿನ್ಯ ಮೌಲ್ಯಮಾಪನ ಮಂಡಳಿ ಅಧ್ಯಕ್ಷ ಎ.ಎನ್. ಮಹೇಶ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜೇಗೌಡ, ಬಿ.ಎಸ್.ಪಿ. ಪಕ್ಷದ ರಾಜ್ಯ ಪ್ರಧಾನ ಕಾರ್ಯ ದರ್ಶಿ ಕೆ.ಟಿ. ರಾಧಾಕೃಷ್ಣ, ನಗರಸಭೆಯ ಆಶ್ರಯ ಸಮಿತಿ ಸದಸ್ಯ ಮಧು, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಹಸಿರು ಫೌಂಡೇ ಶನ್ ಅಧ್ಯಕ್ಷ ರತನ್, ಕಿರಣ್‌ರಾಜ್ ಜಾಥದಲ್ಲಿ ಪಾಲ್ಗೊಂಡಿದ್ದರು.-- ಕೋಟ್‌--ದುರಾಸೆಯಿಂದ ಪ್ರಕೃತಿ ನಾಶ ಆಗುತ್ತಿದೆ. ಪ್ರಕೃತಿಯ ಉತ್ಪನ್ನವನ್ನು ಸ್ವೀಕಾರ ಮಾಡುತ್ತಿದ್ದೇವೆ. ವಿಶ್ವ ಪರಿಸರ ದಿನಾಚರಣೆ ಎಲ್ಲರಲ್ಲೂ ಜಾಗೃತಿ ಮೂಡಿಸಲಿ, ನಾವು ಸೃಷ್ಟಿಯ ಭಾಗ, ಸೃಷ್ಟಿ ನಮಗಾಗಿ ಅಲ್ಲ. ಹಾಗಾಗಿ ಅದನ್ನು ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯ

-ಸಿ.ಟಿ. ರವಿ, ಸದಸ್ಯರು, ವಿಧಾನ ಪರಿಷತ್ -ಫೋಟೋ

ಚಿಕ್ಕಮಗಳೂರಿನ ತಾಲೂಕು ಕಚೇರಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಜಾಥಕ್ಕೆ ಶಾಸಕ ಎಚ್.ಡಿ. ತಮ್ಮಯ್ಯ ಚಾಲನೆ ನೀಡಿದರು. ಈ ವೇಳೆ ವಿಧಾನಪರಿಷತ್‌ ಸದಸ್ಯರಾದ ಸಿ.ಟಿ.ರವಿ. ಎಸ್‌.ಎಲ್‌.ಭೋಜೇಗೌಡ, ಎ.ಎನ್. ಮಹೇಶ್ ಮೊದಲಾದವರಿದ್ದರು.--ಬಾಕ್ಸ್‌--

ಗಾಂಧಿ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯ ನಗರದ ಗಾಂಧಿ ಪಾರ್ಕ್‌ನಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನ ಟೌನ್ ಮಹಿಳಾ ಸಮಾಜ ಇಂಗ್ಲಿಷ್‌ ಮಾಧ್ಯಮ ಶಾಲೆ ಶಿಕ್ಷಕರು ಶಿಕ್ಷಕಿಯರು, ಮಕ್ಕಳು ಸ್ವಚ್ಛತಾ ಅಭಿಯಾನ ನಡೆಸಿ, ಗಿಡನೆಟ್ಟರು.

(ಫೋಟೋ ಇದೆ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಮನವಿ
ಹಸಿರು, ಉಸಿರಿಗಾಗಿ ಪರಿಸರ ಉಳಿಸೋಣ: ಶಾಸಕ ಡಿ.ಜಿ.ಶಾಂತನಗೌಡ