ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಾಲೂಕಿನ ಅರೂರು ಬಳಿಯ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಭಾನುವಾರ ಸಂಸ್ಥೆ ಹಮ್ಮಿಕೊಂಡಿದ್ದ ನಮ್ಮ ಗ್ರಹ ಮತ್ತು ಅದರ ಪರಿಸರ ಸಂರಕ್ಷಿಸಿ ಕಾರ್ಯಕ್ರಮದಡಿ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಪಮಾನ ಹೆಚ್ಚಳದಿಂದ ಅಪಾಯಪ್ರಕೃತಿಯಲ್ಲಿನ ಏರುಪೇರುಗಳಿಂದ ಭೂಮಿಯ ತಾಪಮಾನ ಹೆಚ್ಚಾಗಿದ್ದು ಅದರಿಂದ ಪ್ರಾಕೃತಿಕ ಅಸಮತೋಲನ ಏರ್ಪಟ್ಟಿದೆ. ತಾಪಮಾನವನ್ನು ನಿಯಂತ್ರಿಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾವಿಸಿ ಕಾಡನ್ನು ಉಳಿಸಿ, ಬೆಳೆಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ನರಸಿಂಹ ಮಾತನಾಡಿ, ಭೂಮಿ ನಮ್ಮ ಪೂರ್ವಿಕರಿಂದ ಪಡೆದ ಉಡುಗೊರೆಯಲ್ಲ, ಬದಲಾಗಿ ಇನ್ನೂ ಹುಟ್ಟಿ ಬರಲಿರುವ ಜನಾಂಗದಿಂದ ಪಡೆದಿರುವ ಋಣಭಾರ. ಆದ್ದರಿಂದ ಪರಿಸರ ಸಂರಕ್ಷಣೆ ಮೂಲಕ ಭೂಮಿಯನ್ನು ಜೋಪಾನವಾಗಿಡುವುದು ಪ್ರತಿಯೊಬ್ಬ ವ್ಯಕ್ತಿಯ ಜೀವನಧರ್ಮವಾಗಬೇಕು ಎಂದರು.