ಕನ್ನಡಪ್ರಭದಿಂದ ಪರಿಸರ ಕಾಳಜಿ: ಅರ್ಜುನವಾಡ

KannadaprabhaNewsNetwork |  
Published : Jan 12, 2026, 03:00 AM IST
ಅರಣ್ಯ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ: ರಾಜ್ಯದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಲಿ ಎಂಬ ಉದ್ದೇಶದಿಂದ ಕನ್ನಡಪ್ರಭ ದಿನಪತ್ರಿಕೆ ನಡೆಸುತ್ತಿರುವ ಕರ್ನಾಟಕ ಅರಣ್ಯ- ವನ್ಯಜೀವಿ ವಿಷಯ ಕುರಿತ ಚಿತ್ರಕಲೆ ಸ್ಪರ್ಧೆ ಪರಿಸರ ಕಾಳಜಿ ಮೂಡಿಸಲು ಸಹಕಾರಿಯಾಗಿದೆ ಎಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ರಾಕೇಶ್ ಅರ್ಜುನವಾಡ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ: ರಾಜ್ಯದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಲಿ ಎಂಬ ಉದ್ದೇಶದಿಂದ ಕನ್ನಡಪ್ರಭ ದಿನಪತ್ರಿಕೆ ನಡೆಸುತ್ತಿರುವ ಕರ್ನಾಟಕ ಅರಣ್ಯ- ವನ್ಯಜೀವಿ ವಿಷಯ ಕುರಿತ ಚಿತ್ರಕಲೆ ಸ್ಪರ್ಧೆ ಪರಿಸರ ಕಾಳಜಿ ಮೂಡಿಸಲು ಸಹಕಾರಿಯಾಗಿದೆ ಎಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ರಾಕೇಶ್ ಅರ್ಜುನವಾಡ ಹೇಳಿದರು.ಪಟ್ಟಣದ ಶಂಕರ ನಗರದ ಅರಣ್ಯ ಇಲಾಖೆಯ ಮಕ್ಕಳ ಉದ್ಯಾನವನದಲ್ಲಿ ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಯನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು. ಪರಿಸರ ಮತ್ತು ಜೀವಸಂಕುಲ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅರಣ್ಯ ಸಂಪತ್ತು ಇದ್ದರೆ ಕಾಲಕ್ಕೆ ತಕ್ಕಂತೆ ಮಳೆಗಾಲ, ಚಳಿಗಾಲ, ಬೇಸಿಗೆ ಕಾಲಗಳು ಬರಲಿವೆ. ಅರಣ್ಯ ಮತ್ತು ವನ್ಯಜೀವಿಗಳು ನಮ್ಮ ದೇಶದ ಸಂಪತ್ತುಗಳಾಗಿವೆ. ವನ್ಯಜೀವಿಗಳು, ಅರಣ್ಯ ಸಂಪತ್ತನ್ನು ಪ್ರೀತಿಸೋಣ, ರಕ್ಷಿಸೋಣ ಎಂದರು.

ಕನ್ನಡಪ್ರಭ ಚಿತ್ರಕಲಾ ಸ್ಪರ್ಧೆಯಲ್ಲಿ ನಮ್ಮ ಅಥಣಿ ತಾಲೂಕಿನಿಂದ ಬಣಜವಾಡ ಶಿಕ್ಷಣ ಸಂಸ್ಥೆಯ ಅನುಶ್ರೀ ಮಾರುತಿ ದುಮಾಳೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮೆಲ್ಲರಿಗೆ ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಉದಯ ಮಾಕಾಣಿ, ಕನ್ನಡಪ್ರಭ ವರದಿಗಾರ ಅಣ್ಣಾಸಾಬ ತೆಲಸoಗ, ಮಾರುತಿ ದುಮಾಳೆ, ಜಬ್ಬಾರ ಚಿಂಚಲಿ, ಯಾಶೀನ್ ಝರೆ ಸೇರಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ