ಹಾನಗಲ್ಲ: ಪರಿಸರಕ್ಕೆ ಧಕ್ಕೆ ಮಾಡುವ ಮನುಷ್ಯನಿಗೆ ಇದು ಮಾನವಕುಲದ ಬೆಳವಣಿಗೆಗೆ ಧಕ್ಕೆ ಎಂಬ ಅರಿವು ಮೂಡಿದರೆ ಮಾತ್ರ ಬದಲಾವಣೆ ಸಾಧ್ಯ. ಕಳೆದ ೪೪ ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇದಕ್ಕಾಗಿ ಜನಜಾಗೃತಿ ಮೂಡಿಸುತ್ತಿದೆ ಎಂದು ಸಂಸ್ಥೆಯ ತಾಲೂಕು ಕೃಷಿ ಮೇಲ್ವಿಚಾರಕ ಮಹಾಂತೇಶ ಹರ್ಕುಣಿ ತಿಳಿಸಿದರು.ತಾಲೂಕಿನ ಹೆಜ್ಜಿಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿದ್ದ ಪರಿಸರ ದಿನಾಚರಣೆ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಇಡೀ ರಾಜ್ಯದಲ್ಲಿ ಕೆರೆ ಹೂಳೆತ್ತುವುದು, ಕೃಷಿ ಅಭಿವೃದ್ಧಿಪಡಿಸುವುದು, ಪರಿಸರ ಸಂರಕ್ಷಿಸುವುದು, ಮಂದಿರಗಳ ಜೀರ್ಣೋದ್ಧಾರವೂ ಸೇರಿದಂತೆ ಸಮಾಜಮುಖಿ ಕಾರ್ಯದಲ್ಲಿ ಮುಂದಿದೆ. ಸರ್ಕಾರದ ಜತೆಗೆ ಸಂಸ್ಥೆಯೂ ಒಂದು ಭಾಗವಾಗಿ ಜನಹಿತಕ್ಕೆ ಮುಂದಾಗಿದೆ ಎಂದರು.ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಜಯವಂತಪ್ಪ ಬೆಳಗಲ, ಕಾರ್ಯದರ್ಶಿ ನೀಲಪ್ಪ ತಿಳವಳ್ಳಿ, ಸಾಹಿತಿ ಮಾರುತಿ ಶಿಡ್ಲಾಪೂರ ಗ್ರಾಪಂ ಸದಸ್ಯ ಜಗದೀಶ ಹಿರೇಕಣಗಿ, ಅಣ್ಣಪ್ಪ ಸಣ್ಣಮನಿ, ಸುರೇಶ ಮಲಗುಂದ, ನಿಂಗಪ್ಪ ಹಳೆಕೋಟಿ, ಒಕ್ಕೂಟದ ಅಧ್ಯಕ್ಷೆ ಸುನಂದಾ ಹಳೆಕೋಟಿ, ಮಮತಾ ಕಾರಕೂನ, ರಾಧಾ ಸಾಬರದ, ಕನ್ನಪ್ಪ ಬಂಕಾಪುರ, ಕೇತೇಶ ಹಿರೇಕಣಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಸಸಿ ನೆಡುವುದು:ಕಾರ್ಯಕ್ರಮದ ನಂತರ ಗ್ರಾಮದ ಬಸವೇಶ್ವರ ದೇವಸ್ಥಾನದ ಸುತ್ತ ವಿವಿಧ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಧರ್ಮಸ್ಥಳ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಸಸಿಗಳನ್ನು ಕಾಪಾಡುವ ಜವಾಬ್ದಾರಿ ಪ್ರಕಟಿಸಿದರು. ಜಿಡ್ಡು ಪದಾರ್ಥ ಸೇವನೆ ಆರೋಗ್ಯಕ್ಕೆ ಹಾನಿಕರ
ರಾಣಿಬೆನ್ನೂರು: ಜಿಡ್ಡು ಪದಾರ್ಥಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ದಾವಣಗೆರೆ ಬಾಪೂಜಿ ವಿದ್ಯಾಸಂಸ್ಥೆಯ ದಂತ ವಿಜ್ಞಾನ ಮಹಾವಿದ್ಯಾಲಯದ ಎಚ್ಒಡಿ ಪ್ರೊ. ಪ್ರಶಾಂತ ಜಿ.ಎಂ. ತಿಳಿಸಿದರು.ನಗರದ ಆರ್ಟಿಇಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಾವಣಗೆರೆ ಬಾಪೂಜಿ ವಿದ್ಯಾಸಂಸ್ಥೆ ದಂತ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ದಂತ ಚಿಕಿತ್ಸಾಲಯ ವಿಭಾಗ, ಸ್ಥಳೀಯ ಇನರ್ವಿಲ್ ಕ್ಲಬ್ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ದಂತ ತಪಾಸಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿದಿನ ಎರಡು ಬಾರಿ ಹಲ್ಲುಗಳನ್ನು ಶುಚಿಗೊಳಿಸಬೇಕು ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ ಬ್ರಷ್ಗಳನ್ನು ಬದಲಾಯಿಸಬೇಕು ಎಂದರು.ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸೀತಾ ಕೋಟಿ ಮಾತನಾಡಿದರು. ಪ್ರಾ. ಸಿ.ಎ. ಹರಿಹರ ಅಧ್ಯಕ್ಷತೆ ವಹಿಸಿದ್ದರು.
ಡಾ. ಮಿಥುನ್, ಡಾ. ಪ್ರಿಯಾ ಹಲ್ಲುಗಳನ್ನು ಯಾವ ತೆರನಾಗಿ ಉಜ್ಜಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು. ಇನ್ನರ್ವಿಲ್ ಸಂಸ್ಥೆ ಅಧ್ಯಕ್ಷೆ ಸಂಜನಾ ಕುರುವತ್ತಿ, ಉಪಾಧ್ಯಕ್ಷೆ ಪ್ರಮೀಳಾ ಜಂಬಗಿ, ಡಾ. ಶ್ರೀನಿಧಿ, ಡಾ. ಅನನ್ಯ, ಡಾ. ಅಮೃತಾ, ಡಾ. ಹೇವಿನಿ, ಡಾ. ಸರಸ್ವತಿ ಬಮ್ಮನಾಳ, ಕುಮಾರ ಕಲ್ಲನಗೌಡ, ಡಾ. ಮಧುಕುಮಾರ ಆರ್., ಅಂಜನಾ ಪವಾರ, ಭಾಗ್ಯಶ್ರೀ ಗುಂಡಗಟ್ಟಿ, ರಶ್ಮಿ ಪಿಸೆ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.