ಕನ್ನಡಪ್ರಭ ವಾರ್ತೆ ಬೀದರ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕಛೇರಿ ಕಲಬುರ್ಗಿಯ ಪ್ರೊ.ಡಾ.ಬಿ.ಶಂಭು ಲಿಂಗಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾನವ ಚಟುವಟಿಕೆಗಳಿಂದಾಗಿ ಪರಿಸರ ನಾಶವಾಗುತ್ತಿದೆ, ಪರಿಸರದ ಉಳಿವಿಗಾಗಿ ಇಂಧನದ ನವೀನ ಆಯ್ಕೆಗಳಾದ ಸೌರಶಕ್ತಿ, ವಾಯುಶಕ್ತಿ ಮತ್ತು ಜಲಶಕ್ತಿಯಂತಹ ನವೀಕರಿಸಬಹುದಾದ ಅಗತ್ಯತೆಯನ್ನು ಹೊರಹಾಕಿ, ಇವುಗಳು ಇಂದಿನ ದಿನಗಳಲ್ಲಿ ಪೆಟ್ರೋಲಿಯಂ ಹಾಗೂ ಕಲ್ಲಿದ್ದಲಿಗಿಂತ ಕಡಿಮೆ ವೆಚ್ಚದಲ್ಲಿ ಲಭ್ಯವಿರುವ ಶಕ್ತಿಯ ಮೂಲ ಗಳಾಗಿವೆ ಎಂಬುದನ್ನು ವಿವರಿಸಿದರು.
ಕೇಂದ್ರ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನಗಳ ಡೀನ್ ಆಗಿರುವ ಪ್ರೊ. ಪಾಂಡುರಂಗ ವಿ. ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಭಾರತ ಮಾಡಲು ವರ್ಷಗಳು ಬೇಕಾಗುತ್ತದೆ ಎಂಬ ಗಂಭೀರ ವಿಷಯವನ್ನು ಉಲ್ಲೇಖಿಸಿ ನೈಸರ್ಗಿಕ ಸಂಪತ್ತುಗಳನ್ನು ಭವಿಷ್ಯ ಪೀಳಿಗೆಗಾಗಿ ಉಳಿಸಿ ಕೊಡುವ ಜವಾಬ್ದಾರಿ ಇಂದಿನ ಯುವಪೀಳಿಗೆಯ ಮೇಲಿದೆ ಎಂದು ತಿಳಿಸಿದರು.2015ರಿಂದ ಸ್ಥಿರ ಅಭಿವೃದ್ಧಿಯ ಕುರಿತಾಗಿ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆದಿವೆ.ಇಂದಿನ ಯುವಕರು ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರೆ ಕೊಟ್ಟರು.
ಎಂಬಿಎ ವಿಭಾಗದ ಮುಖ್ಯಸ್ಥೆ ಡಾ.ಜ್ಯೋತಿ ಐನಾಪುರ ಸ್ವಾಗತ ಕೋರಿದರೆ ಪ್ರಾಂಶುಪಾಲ ಡಾ.ಎಂ.ಧನಂಜಯ್, ಡಾ.ಮಹೇಶ್ ಕುಮಾರ, ಡಾ.ಶಶಿಧರ್ ಪಾಟೀಲ್, ಡಾ. ವಿಜಯರಾಜ್ ಸಾಹು ಮತ್ತು ಡಾ.ಹೂರ್ ಉನ್ನಿಸಾ ಉಪಸ್ಥಿತರಿದ್ದರು.