ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಅಭಿನವ ಗಿರಿರಾಜ್

KannadaprabhaNewsNetwork |  
Published : Jun 06, 2025, 12:39 AM IST
ನರಸಿಂಹರಾಜಪುರ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಜೇಸಿ ಪೂರ್ವಾಧ್ಯಕ್ಷ  ಅಭಿನವ ಗಿರಿರಾಜ್ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ಜೇಸಿ ಅಧ್ಯಕ್ಷ ಸಾರ್ಥಕ್ ಗೌಡ, ಕಾರ್ಯದರ್ಶಿ ಮಿಥುನ್ ಗೌಡ ಹಾಗೂ ಇತರ ಸದಸ್ಯರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಪೂರ್ವಾಧ್ಯಕ್ಷ ಅಭಿನವ ಗಿರಿರಾಜ್ ತಿಳಿಸಿದರು.

ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ

ಕನ್ನಡಪ್ರಭವಾರ್ತೆ, ನರಸಿಂಹರಾಜಪುರ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಪೂರ್ವಾಧ್ಯಕ್ಷ ಅಭಿನವ ಗಿರಿರಾಜ್ ತಿಳಿಸಿದರು.

ಬುಧವಾರ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಆಶ್ರಯದಲ್ಲಿ ಅಭಿನವ ಸಂಗೀತ ನೃತ್ಯ ಶಾಲಾ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಭೂಮಿ ತಾಯಿ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಕೇವಲ ಗಿಡ ನೆಡುವುದು ಮಾತ್ರವಲ್ಲ. ಅದನ್ನು ಬೆಳೆಸಿ ದೊಡ್ಡ ಮರ ಆಗುವವರೆಗೂ ರಕ್ಷಣೆ ಮಾಡಬೇಕಾಗಿದೆ. ಪರಿಸರ ಸಂರಕ್ಷಣೆ ಕೂಡಾ ಸಹ ಮುಖ್ಯವಾಗಿದೆ. ಭೂಮಿ, ಗಾಳಿ ಸ್ವಚ್ಛವಾಗಿದ್ದರೆ ಎಲ್ಲರೂ ಆರೋಗ್ಯ ವಾಗಿರುತ್ತಾರೆ ಎಂದರು.

ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಉಪಾಧ್ಯಕ್ಷ ಅಜಯ್ ಮಾತನಾಡಿ, ಪರಿಸರ ಉಳಿಸುವುದು ಬಹಳ ಮುಖ್ಯ. ಪ್ಲಾಸ್ಟಿಕ್ ಮುಕ್ತ ಪರಿಸರ ಆಗಬೇಕಾಗಿದೆ. ಪರಿಸರ ಜಾಗೃತಿ ಮೂಡಿಸುವ ಸಂಘ, ಸಂಸ್ಥೆಗಳ ಜವಾಬ್ದಾರಿ ಸಹ ಆಗಿದೆ ಎಂದರು.

ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಸಾರ್ಥಕ ಗೌಡ ಮಾತನಾಡಿ, ಜೇಸಿ ಸಂಸ್ಥೆಯಿಂದ ಪ್ರತಿ ವರ್ಷ ಪರಿಸರ ದಿನಾಚರಣೆ ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಜೇಸಿ ಸಂಸ್ಥೆ ಕಾರ್ಯದರ್ಶಿ ಮಿಥುನ್ ಗೌಡ, ಕಾರ್ಯಕ್ರಮ ನಿರ್ದೇಶಕ ಜೋಯಿ, ನಾಗಲಾಪುರ ಗ್ರಾಮದ ಕೃಷಿಕರಾದ ಶ್ರೀನಿವಾಸ್, ಶಾಜು, ಡೇವೀಸ್, ನಿಶ್ಚಿತ್, ಜೂನಿಯರ್ ಜೇಸಿ ಐಸಿರಿ ಇದ್ದರು. ನಂತರ ಹಲಸು, ಮಾವು ಹಾಗೂ ಗೇರು ಗಿಡಗಳನ್ನು ನೆಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ