ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಡಾ.ಬಿ.ಆರ್.ಗಂಗಾಧರಪ್ಪ

KannadaprabhaNewsNetwork |  
Published : Jun 14, 2026, 01:15 AM IST
್ಿ | Kannada Prabha

ಸಾರಾಂಶ

ಶೃಂಗೇರಿಪ್ರಕೃತಿಯಲ್ಲಿ ಸಕಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ. ಇತ್ತೀಚಿನ ದಿನಗಳಲ್ಲಿ ಪರಿಸರ ನಾಶದ ಪರಿಣಾಮ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಪರಿಸರ ಮಾಲಿನ್ಯದಿಂದ ಮುಕ್ತಗೊಳಿಸಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.

ಕಾಂಚಿನಗರ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ಪ್ರಕೃತಿಯಲ್ಲಿ ಸಕಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ. ಇತ್ತೀಚಿನ ದಿನಗಳಲ್ಲಿ ಪರಿಸರ ನಾಶದ ಪರಿಣಾಮ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಪರಿಸರ ಮಾಲಿನ್ಯದಿಂದ ಮುಕ್ತಗೊಳಿಸಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.

ಪಟ್ಟಣದ ಕಾಂಚಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪರಿಸರ ಕುರಿತ ಮಕ್ಕಳಿಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಣ್ಣು, ಮರಳು ಗಣಿಗಾರಿಕೆ,ಅಭಿವೃದ್ಧಿ ಇತ್ಯಾದಿ ಚಟುವಟಿಕೆಗಳಿಂದ ಪ್ರಕೃತಿ ಮೇಲೆ ಪರಿಣಾಮ ಬೀರಿ ನೆರೆ, ಪ್ರವಾಹ, ಭೂಕುಸಿತ, ಗುಡ್ಡ ಕುಸಿತದಂತಹ ಘಟನೆಗಳನ್ನು ಸಂಭವಿಸುತ್ತಿವೆ.

ಇತ್ತೀಚೆಗೆ ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಭವಿಸಿದ ಭೂಕುಸಿತ, ನೆರೆ ಪ್ರಕೃತಿ ವಿಕೋಪಗಳು ಎಲ್ಲರ ಕಣ್ಮುಂದೆ ಇದೆ. ಅಭಿವೃದ್ಧಿಯೂ ಬೇಕು, ಪರಿಸರವೂ ಉಳಿಯಬೇಕು.ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸರಿಯಲ್ಲ. ಸ್ವಾಭಾವಿಕ ಅರಣ್ಯ ರಕ್ಷಿಸಬೇಕು. ಪ್ರಕೃತಿ ನಮಗೆ ಏನೆಲ್ಲ ನೀಡಿದೆ. ಪ್ರಕೃತಿ ಮುನಿದರೆ ಮನುಕುಲದ ನಾಶ ಖಂಡಿತಾ ಸಾದ್ಯ.

ನದಿಗಳು, ಕೆರೆಗಳು ಇತ್ಯಾದಿ ಜಲಮೂಲಗಳನ್ನು ಸಂರಕ್ಷಣೆ ಮಾಡಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ತ್ಯಾಜ್ಯಗಳನ್ನು ಎಸೆಯದೇ ಸಂಗ್ರಹಿಸಿಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಮ್ಮ ಮುಖ್ಯ ಗುರಿಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲಾವರಣದಲ್ಲಿ ಸಸಿಗಳನ್ನು ನೆಡಲಾಯಿತು.

ಶಾಲಾ ಮುಖ್ಯಶಿಕ್ಷಕ ರಾಜೀವ ವೈ.ಆರ್,ಶಿಕ್ಷಕ ಸಿ ವೈ ಯೋಗಮೂರ್ತಿ,ಹೊನ್ನೆಗೌಡ ಮತ್ತಿತರರು ಉಪಸ್ಥಿತರಿದ್ದರು.

13 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಕಾಂಚೀನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಡಾ.ಬಿ.ಆರ್.ಗಂಗಾಧರಪ್ಪ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂಪ್ಲಾಂಟ್ ಗರ್ಭ ತಡೆ ಸುಲಭ ವಿಧಾನ
ಪ್ರಧಾನ ಮಂತ್ರಿ ಯೋಜನೆಗಳ ಜಾರಿಯಲ್ಲಿ ಚಿತ್ರದುರ್ಗ ಕಡೇ ಸ್ಥಾನ