ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ

KannadaprabhaNewsNetwork |  
Published : Jun 06, 2025, 02:54 AM ISTUpdated : Jun 06, 2025, 02:55 AM IST
ಫೋಟೋ ಜೂ.೫ ವೈ.ಎಲ್.ಪಿ. ೦೬ | Kannada Prabha

ಸಾರಾಂಶ

ಇಂದಿನ ಪರಿಸರ ಮಾಲಿನ್ಯ ಮತ್ತು ಜಾಗತಿಕ ತಾಪಮಾನ ಏರಿಕೆ ಮಾನವ ಕುಲಕ್ಕೆ ದೊಡ್ಡ ಸವಾಲಾಗಿದೆ.

ಯಲ್ಲಾಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಪರಿಸರ ಮಾಲಿನ್ಯ ಮತ್ತು ಜಾಗತಿಕ ತಾಪಮಾನ ಏರಿಕೆ ಮಾನವ ಕುಲಕ್ಕೆ ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಪ್ರಾಂಶುಪಾಲ ಡಾ.ಆರ್.ಡಿ. ಜನಾರ್ದನ್ ಹೇಳಿದರು.

ಗುರುವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಜಾಗೃತಿಯ ಸಂದೇಶ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಸಿ ನೆಡುವುದು ಕೇವಲ ಒಂದು ಸಂಕೇತ ಮಾತ್ರವಲ್ಲ, ಅದು ನಮ್ಮ ಭವಿಷ್ಯದ ಬದುಕಿಗೆ ಹಾಕುವ ಬುನಾದಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣಾಧಿಕಾರಿ ಕಾರವಾರ ಡಾ.ಕ್ಯಾಪ್ಟನ್ ರಮೇಶ್ ರಾವ್ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಪ್ರಜ್ಞೆ ಬೆಳೆಸುವುದು ಅತ್ಯಗತ್ಯ. ಚಿಕ್ಕ ವಯಸ್ಸಿನಿಂದಲೇ ಪರಿಸರದ ಮಹತ್ವ ಅರಿತುಕೊಂಡರೇ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಪರಿಸರ ಸ್ನೇಹಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ, ಬೋಧಕರು ಮತ್ತು ವಿದ್ಯಾರ್ಥಿಗಳು ಸಸಿಗಳನ್ನು ನೆಡಲಾಯಿತು. ಇದೇ ವೇಳೆ ಪರಿಸರದ ಕುರಿತು ಚಿಕ್ಕ ನಾಟಕ ಪ್ರದರ್ಶಿಸಲಾಯಿತು.

ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮ ನಡೆಸಿಕೊಟ್ಟರು.

ಯಲ್ಲಾಪುರದ ಸ.ಪ್ರ.ದ.ಕಾಲೇಜಿನಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ