ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ರಿಚ್ಮಂಡ್ ಸರ್ಕಲ್ ಸಮೀಪದ ಬ್ಯಾಂಕ್ನ ಕಚೇರಿ, ರಾಜರಾಜೇಶ್ವರಿ ನಗರ, ಜಯನಗರ, ಜೆ.ಪಿ.ನಗರ ಹಾಗೂ ಅಂಜನಾಪುರದಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದೆ. ಈ ವೇಳೆ ಕೆಲವು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ತಲೆಮರೆಸಿಕೊಂಡಿರುವ ಆರೋಪಗಳಿಗೆ ಹುಡುಕಾಟ ಚುರುಕುಗೊಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಹೂಡಿಕೆ ಹೆಸರಿನಲ್ಲಿ 70 ರಿಂದ 75 ಕೋಟಿ ರು ವರೆಗೆ ಗ್ರಾಹಕರ ಹಣವನ್ನು ಬ್ಯಾಂಕ್ನ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ವಂಚನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಬ್ಯಾಂಕ್ನ ಕಾರ್ಯನಿರ್ವಾಹಕ ಅಧಿಕಾರಿ ಬಂಧನವಾಗಿದ್ದು, ತಪ್ಪಿಸಿಕೊಂಡಿರುವ ಲೆಕ್ಕಧಿಕಾರಿ ಸೇರಿದಂತೆ ಇತರರ ಪತ್ತೆ ಪೊಲೀಸರು ಶೋಧ ನಡೆಸಿದ್ದಾರೆ. ಈ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು, ಬ್ಯಾಂಕ್ನ ಕಚೇರಿ ಹಾಗೂ ಆರೋಪಿಗಳ ಮನೆಗಳಲ್ಲಿ ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ....ಬಾಕ್ಸ್...ಸಿಐಡಿ ವರ್ಗಾವಣೆ?
ಇಪಿಎಫ್ಓ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾವಣೆಯಾಗಲಿದೆ ಎಂದು ತಿಳಿದು ಬಂದಿದೆ. ಈ ಬ್ಯಾಂಕ್ನಲ್ಲಿ ಸುಮಾರು 70 ಕೋಟಿ ರುನಷ್ಟು ಆರ್ಥಿಕ ಅಪರಾಧ ವಂಚನೆ ನಡೆದಿದೆ. ನಿಯಮಾನುಸಾರ 5 ಕೋಟಿಗಿಂತ ಮಿಗಿಲಾದ ಆರ್ಥಿಕ ಅಪರಾಧ ಕೃತ್ಯಗಳು ಸಿಐಡಿ ವ್ಯಾಪ್ತಿಗೆ ಬರಲಿದೆ. ಅಂತೆಯೇ ಈ ಪ್ರಕರಣವು ಸಹ ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.