ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಸಮಪಾಲು: ಪ್ರತಾಪಸಿಂಹ ನಾಯಕ್

KannadaprabhaNewsNetwork |  
Published : Mar 06, 2024, 02:16 AM IST
ವಾಹನ | Kannada Prabha

ಸಾರಾಂಶ

ಮಹಿಳಾ ಮೋರ್ಚಾದ ತಾಲೂಕು ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ ಸ್ವಾಗತಿಸಿದರು. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಿಂದ ಬೆಳಾಲು ಕ್ರಾಸ್‌ ತನಕ ನೂರಾರು ಮಹಿಳೆಯರಿಂದ ಭಾರತ್‌ ಮಾತಾ ಕಿ ಜೈ ಘೋಷಣೆಯೊಂದಿಗೆ ದ್ವಿಚಕ್ರ ವಾಹನ ಜಾಥಾ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ರಥಕ್ಕೆ ಎರಡು ಚಕ್ರಗಳಿದ್ದಂತೆ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಮಹಿಳೆಯರು ಸೈನ್ಯದಿಂದ ಹಿಡಿದು ಎಲ್ಲ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಸರಿಸಮಾನ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ವಿಶ್ವ ಮಹಿಳಾ ದಿನಾಚರಣೆಗೆ ವಿಶೇಷ ಕೊಡುಗೆಯಾಗಿ ಕೇಂದ್ರ ಸರಕಾರ 27 ವರ್ಷಗಳ ಬೇಡಿಕೆಯಾಗಿದ್ದ ಶೇ.33 ಮಹಿಳಾ ಮೀಸಲಾತಿಯ ಮಹಿಳಾ ಸಶಕ್ತೀಕರಣದ ಐತಿಹಾಸಿಕ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ಹೇಳಿದರು. ಉಜಿರೆಯ ಶ್ರೀ ಶಾರದಾ ಮಂಟಪ ಮುಂಭಾಗದಲ್ಲಿ ಮಂಗಳವಾರ ಬೆಳ್ತಂಗಡಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಡೆದ ದ್ವಿಚಕ್ರ ವಾಹನ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದ ಮೋದಿ ಸರ್ಕಾರ ನೂರಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಹಿಳೆಯರ ಆತ್ಮಶಕ್ತಿ ಜಾಗೃತಗೊಳಿಸಿ ಸರಿ ಸಮಾನ ಸ್ಥಾನಮಾನ ನೀಡಿದೆ. ಜನಧನ, ಬೇಟಿ ಬಚಾವೊ, ಬೇಟಿ ಪಡಾವೋ ಮೊದಲಾದ ಯೋಜನೆಗಳ ಮೂಲಕ ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ, ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿರುವುದು ಮಹಿಳೆಯರಿಗೆ ಅವಕಾಶಗಳನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು.

ಬೆಳ್ತಂಗಡಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಮಾತನಾಡಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಮೀಸಲಾತಿ ಹಕ್ಕನ್ನು ಜಾರಿಗೊಳಿಸಿರುವುದು ಶ್ಲಾಘನೀಯ. ಅನೇಕ ವರ್ಷಗಳಿಂದ ಇದರ ಜಾರಿಗೆ ಕಾಯುತ್ತಿದ್ದ ಮಹಿಳೆಯರಲ್ಲಿ ಇಂದು ಸಂತಸ ಮೂಡಿದ್ದು ,ಅದಕ್ಕಾಗಿ ನಾರಿ ಶಕ್ತಿಯ ಜಾಗೃತಿಗಾಗಿ ವಿಶೇಷ ವಾಹನ ರಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸರಾವ್, ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಕಿರಣ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಪ್ರಮುಖರಾದ ಕೊರಗಪ್ಪ ಗೌಡ, ಜಯಂತಗೌಡ ಗುರಿಪಳ್ಳ, ಅರವಿಂದ ಲಾಯಿಲ, ಜಯಾನಂದ ಗೌಡ ಪ್ರಜ್ವಲ್, ಸೀತಾರಾಮ ಬೆಳಾಲು, ಯಶವಂತ ಪುದುವೆಟ್ಟು, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ನಿರಂಜನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮೋರ್ಚಾದ ತಾಲೂಕು ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ ಸ್ವಾಗತಿಸಿದರು. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಿಂದ ಬೆಳಾಲು ಕ್ರಾಸ್‌ ತನಕ ನೂರಾರು ಮಹಿಳೆಯರಿಂದ ಭಾರತ್‌ ಮಾತಾ ಕಿ ಜೈ ಘೋಷಣೆಯೊಂದಿಗೆ ದ್ವಿಚಕ್ರ ವಾಹನ ಜಾಥಾ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌