ರೈತ ದೇವರ ಸಮ: ಕೆ.ಎಂ. ಹೇಮಯ್ಯಸ್ವಾಮಿ

KannadaprabhaNewsNetwork |  
Published : Dec 25, 2023, 01:30 AM ISTUpdated : Dec 25, 2023, 01:31 AM IST
ಕಂಪ್ಲಿ ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರೈತರಿಗೆ ಸನ್ಮಾನಿಸಿ ಗೌರವಿಸಲಾಯಿತು.  | Kannada Prabha

ಸಾರಾಂಶ

ಮನುಷ್ಯನ ಜೀವನಕ್ಕೆ ಅತ್ಯವಶ್ಯಕವಾಗಿರುವ ಅನ್ನ ನೀಡುವ ರೈತ ದೇವರ ಸಮ. ರೈತರಿಲ್ಲದೆ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.

ಕಂಪ್ಲಿ: ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಕಾರ್ಯಕ್ರಮ ಜರುಗಿತು. ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ಕೆ.ಎಂ. ಹೇಮಯ್ಯ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೈತರನ್ನು ದಿನಾಚರಣೆಯ ದಿನಕ್ಕೆ ಸೀಮಿತಗೊಳಿಸದೇ ಯಾವಾಗಲೂ ಗೌರವಪೂರ್ವಕವಾಗಿ ನಡೆದುಕೊಳ್ಳುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಮನುಷ್ಯನ ಜೀವನಕ್ಕೆ ಅತ್ಯವಶ್ಯಕವಾಗಿರುವ ಅನ್ನ ನೀಡುವ ರೈತ ದೇವರ ಸಮ. ರೈತರಿಲ್ಲದೆ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ನಮ್ಮ ನಿರ್ವಹಣೆಯನ್ನು ನೋಡಿಕೊಳ್ಳುವ ಮತ್ತು ಅವರ ಹಕ್ಕುಗಳನ್ನು ನಾವು ರಕ್ಷಿಸಿದರೆ ಪ್ರತಿಯಾಗಿ ನಮ್ಮ ಸಮಾಜದ ಒಂದು ಭಾಗವಿದೆ ಎಂಬುದು ಬಹಳ ಸಂತೋಷದ ಸಂಗತಿಯಾಗಿದೆ. ನೀವು ಅದನ್ನು ಮಾಡಲು ಸಾಧ್ಯವಾದರೆ, ನೀವು ಅವರ ಜೀವನ ಮಟ್ಟವನ್ನು ಹೆಚ್ಚಿಸಬಹುದು. ಆನಂತರ ಇದಕ್ಕಿಂತ ಉತ್ತಮವಾಗಿ ಏನೂ ಸಾಧ್ಯವಿಲ್ಲ. ಅದಕ್ಕಾಗಿಯೇ ರೈತ ದಿನ ಆಚರಿಸುವುದು ಅವಶ್ಯಕ. ಆದ್ದರಿಂದ ನಮಗೆ ಹಣ್ಣುಗಳು, ತರಕಾರಿಗಳು ಮತ್ತು ಭತ್ತದಂತಹ ಮೂಲ ಸರಕುಗಳನ್ನು ಒದಗಿಸುವ ವರ್ಗವನ್ನು ಸಮಾಜದ ಮುಖ್ಯ ಪ್ರವಾಹದೊಂದಿಗೆ ಸಂಪರ್ಕಿಸಬಹುದು. ವಾಸ್ತವವಾಗಿ, ಕೃಷಿಗೆ ಅಗತ್ಯವಾದ ಹೂಡಿಕೆಗಳು, ಸಲಕರಣೆಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಲಭ್ಯವಾಗುವಂತೆ ರೈತರಿಗೆ ಶಿಕ್ಷಣ ನೀಡುವುದು ಸಹ ಅಗತ್ಯವಾಗಿದೆ ಎಂದು ತಿಳಿಸಿದರು.

ರೈತ ದಿನಾಚರಣೆಯ ಅಂಗವಾಗಿ ಸಮಗ್ರ ಕೃಷಿಗಾಗಿ ಜಿಲ್ಲಾ ಪ್ರಶಸ್ತಿ ಪಡೆದ ರಾಮಸಾಗರ ಗ್ರಾಮದ ರೈತ ಜಿ. ಬಸವರಾಜ್, ತೋಟಗಾರಿಕಾ ಕ್ಷೇತ್ರದಲ್ಲಿ ಸಾಧನೆಗೈದ ಎಮ್ಮಿಗನೂರು ಗ್ರಾಮದ ರೈತ ಮಹಿಳೆ ಬನಶಂಕರಿ, ಪ್ರಗತಿಪರ ಬಾಳೆ ಬೆಳೆದ ರೈತರಾದ ಕುರುಬರ ನಾಗಪ್ಪ ಅವರನ್ನು ಗೌರವಿಸಲಾಯಿತು.ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕಿ ಡಾ. ಸಿ.ಆರ್. ಅಭಿಲಾಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುನಿರಾಬಾದ್ ತೋಟಗಾರಿಕಾ ಮಹಾ ವಿದ್ಯಾಲಯದ ವಿಜ್ಞಾನಿ ಡಾ. ಮೌಲಾಸಾಬ್, ಕೃಷಿ ಅಧಿಕಾರಿ ಶ್ರೀಧರ್, ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ.ವಿ. ಗೌಡ, ನಗರ ಘಟಕ ಅಧ್ಯಕ್ಷ ಕೆ. ರಮೇಶ್, ಪ್ರಮುಖರಾದ ಶಿವಪ್ಪ ಬಾರಿಗಿಡದ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ರಾಮಚಂದ್ರ, ಬೇಸಾಯ ಶಾಸ್ತ್ರಜ್ಞ ಶ್ರೀನಿವಾಸ್ ಪೂಜಾರಿ, ಕೃಷಿ ಇಲಾಖೆ ಸಿಬ್ಬಂದಿ ಜ್ಯೋತಿ, ರೇಣುಕರಾಜ್, ಅಮರೇಗೌಡ, ಫಕೀರಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ