ಮಾನವೀಯ ಸೇವೆಗೆ ನರ್ಸಿಂಗ್‌ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ: ಡಾ. ಸಂಕನಗೌಡ ಪಾಟೀಲ್

KannadaprabhaNewsNetwork |  
Published : Apr 19, 2026, 02:15 AM IST
ಗದಗ ನಗರದ ಸಂಕನೂರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವಿಪ ಸದಸ್ಯ ಎಸ್.ವಿ. ಸಂಕನೂರ ಉದ್ಘಾಟಿಸಿದರು. | Kannada Prabha

ಸಾರಾಂಶ

ಗದಗ ನಗರದ ಸಂಕನೂರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನ ಬೇಸಿಕ್ ಬಿಎಸ್‌ಸಿ ನರ್ಸಿಂಗ್ 4ನೇ ಬ್ಯಾಚ್‌ನ ವಿದ್ಯಾರ್ಥಿಗಳ ದೀಪ ಪ್ರಜ್ವಲನ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಗದಗ: ನರ್ಸಿಂಗ್ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗದೇ ತಮ್ಮ ವೃತ್ತಿಯಲ್ಲಿ ಬದ್ಧತೆ ಕಾಪಾಡಿಕೊಂಡು, ನಿರಂತರ ಸಾಧನೆ ಮಾಡುವತ್ತ ಗಮನ ಕೇಂದ್ರೀಕರಿಸಬೇಕು. ಆಸ್ಪತ್ರೆಯಲ್ಲಿ ರೋಗಿಗಳನ್ನು ಆತ್ಮೀಯತೆಯಿಂದ ಉಪಚರಿಸಬೇಕು ಎಂದು ಸೋಲೂರನ ರಾಜಶೇಖರಯ್ಯ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್‌ ಮತ್ತು ಆಸ್ಪತ್ರೆಯ ಪ್ರಾಚಾರ್ಯ, ಆರ್‌ಜಿಯುಎಚ್‌ಎಸ್ ಸೆನೆಟ್‌ ಸದಸ್ಯ ಡಾ. ಸಂಕನಗೌಡ ಪಾಟೀಲ ಹೇಳಿದರು.

ನಗರದ ಸಂಕನೂರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನ ಬೇಸಿಕ್ ಬಿಎಸ್‌ಸಿ ನರ್ಸಿಂಗ್ 4ನೇ ಬ್ಯಾಚ್‌ನ ವಿದ್ಯಾರ್ಥಿಗಳ ದೀಪ ಪ್ರಜ್ವಲನ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ, ಸಾಮಾಜಿಕ ಬದ್ಧತೆ ಕಲಿಸುವ ಜತೆಗೆ ಮಾನವೀಯತೆಯ ಸೇವೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಭಾರತದ ನರ್ಸ್‌ಗಳಿಗೆ ವಿದೇಶಗಳಲ್ಲೂ ಭಾರೀ ಬೇಡಿಕೆಯಿದೆ ಎಂದರು.

ಮಂಡ್ಯ ಜಿಲ್ಲೆಯ ಬೇಲೂರನ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆದಿಚುಂಚನಗಿರಿ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಚಾರ್ಯ ವಿಕ್ಟೋರಿಯಾ ಸರ್ವಂದ ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳು ರೋಗಿಗಳನ್ನು ತಮ್ಮ ಬಂಧುಗಳಂತೆ ತಿಳಿದು ಆರೈಕೆ ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಪ ಸದಸ್ಯ ಹಾಗೂ ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಎಸ್.ವಿ. ಸಂಕನೂರ ಮಾತನಾಡಿ, ನರ್ಸಿಂಗ್‌ ವಿದ್ಯಾರ್ಥಿಗಳು ಕೀಳರಿಮೆ ತೊರೆದು ಅಭಿಮಾನ ಬೆಳೆಸಿಕೊಳ್ಳಬೇಕು. ಪದವಿಯ ಜತೆಗೆ ಜ್ಞಾನ, ಕೌಶಲ್ಯ ಬೆಳೆಸಿಕೊಳ್ಳಬೇಕು. ರೋಗಿಗಳಿಗೆ ಔಷಧಿಗಿಂತಲೂ ಆತ್ಮೀಯತೆ, ಬಾಂಧವ್ಯಯುತ ಸೇವೆ ದೊರೆಯಬೇಕು ಎಂದರು.

ಸಂಕನೂರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನ ಉಪಾಧ್ಯಕ್ಷ ಡಾ. ಪ್ರಕಾಶ ಸಂಕನೂರ, ನಿರ್ದೇಶಕಿ ಡಾ. ಶ್ವೇತಾ ಸಂಕನೂರ, ವಿದ್ಯಾರ್ಥಿ ಪ್ರತಿನಿಧಿ ಅನುಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು. ಡಾ. ಮೀನಾಕ್ಷಿ ದೇವಾಮಗಮಠ ಸಂಸ್ಥೆಯ ವಾರ್ಷಿಕ ವರದಿ ಓದಿದರು. ನರ್ಸಿಂಗ್‌ನಲ್ಲಿ ಚಿನ್ನದ ಪದಕ ಪಡೆದ ಅರ್ಪಿತಾ ಹಾಗೂ ರೇಣುಕಾ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಕವಿತಾ ನಡೆಸಿಕೊಟ್ಟರು.

ಸುಭಾಶ್ಚಂದ್ರ ಸಂಕನೂರ, ಅಂದಪ್ಪ ಸಂಕನೂರ, ರಶ್ಮಿ, ಅಜಯ್ ದುರಗಮ್ಮನವರ, ಅರ್ಪಿತಾ ಪಾಟೀಲ, ದೀಪಾ ಟಿ. ಮಂಜುಳಾ ಉಪಸ್ಥಿತರಿದ್ದರು. 3ನೇ ಸೆಮಿಸ್ಟರ್‌ನ ವಿದ್ಯಾರ್ಥಿನಿಯರು ಸ್ವಾಗತ ನೃತ್ಯ ಪ್ರದರ್ಶಿಸಿದರು. ರಶ್ಮಿ ಸ್ವಾಗತಿಸಿದರು. ಸಂಕನೂರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನ ಆಡಳಿತಾಧಿಕಾರಿಗಳು, ಉಪ ಪ್ರಾಚಾರ್ಯ ವಿನ್‌ಸೆಂಟ್ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ವಿಜಯ ಡಿ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಂಡ್ ಪವರ್ ಕಾಟಕ್ಕೆ ಬೇಸತ್ತು ಹೈಟೆನ್ಷನ್ ಕಂಬ ಏರಿದ ರೈತ
ತುಂಗಭದ್ರಾ ಒಡಲು ಬಗೆದು, ಮರಳು ದಂಧೆ