ನರಗುಂದ: ಸರ್ಕಾರ ಮಕ್ಕಳ ಶಿಕ್ಷಣಕ್ಕೆ ಹಲವಾರು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆದರೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಕನಸು ನನಸಾಗುತ್ತಿಲ್ಲ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅವರಲ್ಲಿ ಸಾತ್ವಿಕ ಗುಣಗಳನ್ನು ಬಿತ್ತಬೇಕು. ಹಿಂದುಳಿದ ಪ್ರದೇಶಗಳಲ್ಲಿ ಅನೇಕ ಮಕ್ಕಳು ಇನ್ನೂ ಸರಿಯಾದ ಶಾಲಾ ಅವಕಾಶಗಳನ್ನು ಹೊಂದಿಲ್ಲ. ಸಮಾನ ಶೈಕ್ಷಣಿಕ ಪ್ರವೇಶ ಉತ್ತೇಜಿಸುವ ಮಹತ್ವವನ್ನು ಬಲಪಡಿಸಬೇಕು. ಆ ನಿಟ್ಟಿನಲ್ಲಿ ಸರಕಾರಿ ಶಾಲೆಗಳನ್ನು ಇನ್ನೂ ಹೆಚ್ಚು ಬಲಪಡಿಸಬೇಕು ಎಂದು ಶಾಂತಲಿಂಗ ಶ್ರೀಗಳು ಹೇಳಿದರು. ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಶ್ರೀ ಗುರು ಬ್ರಹ್ಮಾನಂದ ಶಿವಾನುಭವ ಧರ್ಮ ಸಂಸ್ಥೆ, ಶ್ರೀ ದೊರೆಸ್ವಾಮಿ ವಿವಿದೋದ್ಧೇಶ ಟ್ರಸ್ಟ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 364ನೇ ಮಾಸಿಕ ಶಿವಾನುಭವ ಹಾಗೂ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರಕಾರಿ ಪ್ರೌಢ ಶಾಲೆಯ ದೇವಕ್ಕ ಕಲಾರಿ ಹಾಗೂ ಮೊರಾರ್ಜಿ ವಸತಿ ಶಾಲೆಯ ಸಂದೀಪ ಕಿತ್ತೂರ ಅವರನ್ನು ಶ್ರೀಮಠದಿಂದ ಶ್ರೀಗಳು ಅಭಿನಂದಿಸಿದರು.
ವೇದಿಕೆ ಮೇಲೆ ರತ್ನಕ್ಕ ಶಿಳ್ಳಿನ, ವಿಜಯಕುಮಾರ ಮಾಳವಾಡ, ಲಕ್ಷ್ಮೀಬಾಯಿ ಪಾಟೀಲ, ಜ್ಯೋತಿ ಯಳ್ಳೂರ, ಮಂಗಳಾ ಪಾಟೀಲ, ಸಂಗನಗೌಡ ಪಾಟೀಲ, ಜಗದೀಶ ಕೊಣ್ಣೂರ, ಸುಕನ್ಯಾ ಸಾಲಿ, ನಾಗವ್ವ ಕುಳಗೇರಿ, ಸರಸ್ವತಿ ಹಿರೇಮಠ, ಮಹಾಂತೇಶ ಹಿರೇಮಠ ಇದ್ದರು.