* 9ಕ್ಕೆ. (ಎಡಿಟೆಡ್‌) ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸ್ಪಂದನೆ ಅಗತ್ಯ: ಡಿಸಿ ಡಾ.ವೆಂಕಟೇಶ್‌

KannadaprabhaNewsNetwork |  
Published : Jun 13, 2024, 12:49 AM IST
ಕ್ಯಾಪ್ಷನಃ12ಕೆಡಿವಿಜಿ35ಃದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣನವರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇವಲ ಸರ್ಕಾರ, ಇಲಾಖೆಗಳಿಂದಲೇ ಸಾಧ್ಯವಾಗುವುದಿಲ್ಲ. ಸರ್ಕಾರದ ಜೊತೆಗೆ ಸಾರ್ವಜನಿಕರು ಮತ್ತು ಪೋಷಕರು ಸಹ ಸ್ವಯಂ ಪ್ರೇರಣೆಯಿಂದ ಸ್ಪಂದಿಸಿ, ಶ್ರಮಿಸಿದರೆ ಈ ಸಾಮಾಜಿಕ ಪಿಡುಗು ನಿರ್ಮೂಲನೆ ಸಾಧ್ಯವೆಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನೆ ಸೊಸೈಟಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

- ಜಿಲ್ಲಾಡಳಿತ ನೇತೃತ್ವದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ । ಶಾಲಾ ಮಕ್ಕಳಿಂದ ಜಾಥಾ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇವಲ ಸರ್ಕಾರ, ಇಲಾಖೆಗಳಿಂದಲೇ ಸಾಧ್ಯವಾಗುವುದಿಲ್ಲ. ಸರ್ಕಾರದ ಜೊತೆಗೆ ಸಾರ್ವಜನಿಕರು ಮತ್ತು ಪೋಷಕರು ಸಹ ಸ್ವಯಂ ಪ್ರೇರಣೆಯಿಂದ ಸ್ಪಂದಿಸಿ, ಶ್ರಮಿಸಿದರೆ ಈ ಸಾಮಾಜಿಕ ಪಿಡುಗು ನಿರ್ಮೂಲನೆ ಸಾಧ್ಯವೆಂದು ಜಿಲ್ಲಾಧಿಕಾರಿ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನೆ ಸೊಸೈಟಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ನಗರದ ಎಸ್.ಪಿ.ಎಸ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ವಕೀಲರ ಸಂಘ ಹಾಗೂ ಸ್ವಯಂ ಸೇವಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಮತ್ತು ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಮಾಜಿಕ ಅಥವಾ ನೈತಿಕವಾಗಿ ಹಾನಿಕಾರಕವಾಗಿದೆ. ಆದ್ದರಿಂದ ಬಾಲ್ಯದಲ್ಲಿಯೇ ಮಕ್ಕಳು ಶಾಲೆಗೆ ಬಂದು, ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಆದರೆ, ವಿವಿಧ ಕಾರಣಗಳಿಗಾಗಿ ಪಾಲಕರು ಮಕ್ಕಳನ್ನು ಶಾಲೆ ಬಿಡಿಸಿ ಚಿಕ್ಕ ವಯಸ್ಸಿನಲ್ಲಿಯೇ ದುಡಿಮೆಗೆ ಸೇರಿಸುತ್ತಾರೆ, ಇದು ತಪ್ಪಬೇಕಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣನವರ್‌ ಕಾರ್ಯಕ್ರಮ ಉದ್ಘಾಟಿಸಿ, ಬಾಲಕಾರ್ಮಿಕ ಪದ್ಧತಿ ತಡೆಯಲು ವಿಶ್ವದೆಲ್ಲೆಡೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಸ್ವಾರ್ಥ, ದುರಾಸೆ ಹಾಗೂ ದುರುದ್ದೇಶದಿಂದ ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಗೆ ದೂಡಲಾಗುತ್ತಿದೆ, ಇದು ಅಪರಾಧ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ಸ್ವಾಗತಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಕೊಟ್ರೇಶ್ ಬಾಲಕಾರ್ಮಿಕ ಪದ್ಧತಿ ವಿರೋಧಿ ಪ್ರತಿಜ್ಞೆ ಬೋಧಿಸಿದರು.

ಕಾರ್ಯಕ್ರದಲ್ಲಿ ಜಿಪಂ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ನಾಗರಾಜ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ರಾಮನಾಯ್ಕ, ಸಹಾಯಕ ಕಾರ್ಮಿಕ ಆಯುಕ್ತರಾದ ಎಸ್.ಆರ್. ವೀಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ, ವಕೀಲರ ಸಂಘದ ಅಧ್ಯಕ್ಷರಾದ ಎಲ್.ಎಚ್. ಅರುಣಕುಮಾರ, ಮಂಡಕ್ಕಿ ಭಟ್ಟಿ ಮಾಲೀಕರ ಸಂಘದ ಅಧ್ಯಕ್ಷರು ಅಕ್ಟರ್ ಆಲಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಈ.ಎನ್. ಪ್ರಸನ್ನಕುಮಾರ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮೊದಲು ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಶಾಲಾ ಮಕ್ಕಳಿಂದ ಜಾಥಾ ನಡೆಯಿತು.

- - -

-12ಕೆಡಿವಿಜಿ35ಃ:

ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ನ್ಯಾಯಾಧೀಶ ಮಹಾವೀರ ಮ. ಕರೆಣ್ಣನವರ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ