ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದರಲ್ಲದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಕೂಡ ಮಾಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಟಿಕೆಟ್ ನಿರಾಕರಿಸಲಲಾಯಿತು. ಇದರಿಂದ ಆಕ್ರೋಶಗೊಂಡಿದ್ದ ಈಶ್ವರಪ್ಪ ಶಿವಮೊಗ್ಗದಲ್ಲಿ ತಾವು ಸ್ಪರ್ಧಿಸುವುದಾಗಿ ಘೋಷಿಸಿ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯ ಹಿರಿಯ ನಾಯಕರು ಕಣದಿಂದ ಹಿಂದಕ್ಕೆ ಸರಿಯುವಂತೆ ಮನವಿ ಮಾಡಿದ್ದನ್ನು ಕೂಡ ಈಶ್ವರಪ್ಪ ನಯವಾಗಿಯೇ ನಿರಾಕರಿಸಿ, ಯಡಿಯೂರಪ್ಪ ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಿ ಎಂದು ಪ್ರಚಾರಾಂದೋಲನ ಆರಂಭಿಸಿ, ಇದಕ್ಕಾಗಿಯೇ ತಮ್ಮ ಚುನಾವಣಾ ಸ್ಪರ್ಧೆ ಎಂದು ಹೇಳಲಾರಂಭಿಸಿದ್ದರು. ಬಳಿಕ ಇವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಯಿತು.
ಈಶ್ವರಪ್ಪ ಅವರು ಚುನಾವಣಾ ಸಂದರ್ಭದಲ್ಲಿ ಕೂಡ ತಾವು ಈಗಲೂ ಬಿಜೆಪಿಯಲ್ಲಿಯೇ ಇದ್ದು, ಲೋಕಸಭೆಯಲ್ಲಿ ಗೆದ್ದು ಮೋದಿ ಪರವಾಗಿ ಕೈ ಎತ್ತುತ್ತೇನೆ ಎಂದು ಘೋಷಿಸಿ ದ್ದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಇಟ್ಟುಕೊಂಡೇ ಚುನಾವಣಾ ಪ್ರಚಾರ ನಡೆಸಿದ್ದರು. ಚುನಾವಣಾ ಬಳಿಕ ಜಗದೀಶ್ ಶೆಟ್ಟರ್ ರೀತಿ ತಾವೂ ಬಿಜೆಪಿಗೆ ಮರಳುವುದಾಗಿಯೂ, ಮುಂದೆ ನಡೆಯುವ ನಗರ ಪಾಲಿಕೆ ಚುನಾವಣೆಯಲ್ಲಿ ತಾವೇ ಟಿಕೆಟ್ ಹಂಚುವ ಸ್ಥಾನದಲ್ಲಿ ಇರುವುದಾಗಿ ಹೇಳಿದ್ದರು.ಆದರೆ, ಚುನಾವಣೆಯಲ್ಲಿ ಈಶ್ವರಪ್ಪ ಅವರು ಚುನಾವಣೆಯಲ್ಲಿ ಸೋತಿದ್ದರು. ಸೋತ ಬಳಿಕವೂ ತಮ್ಮ ರಾಷ್ಟ್ರಭಕ್ತರ ಬಳಗದ ಜೊತೆ ಸಕ್ರಿಯವಾಗಿಯೇ ಇದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸುವುದಾದರೆ ಈಶ್ವರಪ್ಪ ಪಕ್ಷ ಸೇರುವುದು ಬಹುತೇಕ ಖಚಿತವಾಗುತ್ತಿದೆ. ಖಚಿತವಾಗದ ಬಿಎಸ್ವೈ, ವಿಜಯೇಂದ್ರ ತೀರ್ಮಾನ
ಸೋಮವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಬಿಜೆಪಿ ವರಿಷ್ಠರು ಬಿಜೆಪಿ ವಾಪಾಸ್ಸಾಗುವಂತೆ ತಮಗೆ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯಬೇಕಿದೆ. ಪಕ್ಷ ಸೇರುವುದಂತೂ ಖಚಿತ. ಆದರೆ ಯಾವಾಗ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಹೇಳಿದ್ದಾರೆ.