ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಪ್ರದೇಶಗಳಿದ್ದು, ಹೆಚ್ಚು ಕಾರ್ಮಿಕರಿದ್ದಾರೆ. ಆದರೆ ಕಾರ್ಮಿಕರಿಗೆ ಸೂಕ್ತವಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಕ್ಷೇತ್ರದಲ್ಲೇ ಇಎಸ್ಐ ಆಸ್ಪತ್ರೆ ನಿರ್ಮಿಸುವುದರಿಂದ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಕಡಿಮೆ ದರದ ಹಾಗೂ ಉಚಿತ ಚಿಕಿತ್ಸೆ ಸಿಗಲಿದೆ. ಈ ಕುರಿತು ಶೀಘ್ರ ಕ್ರಮ ವಹಿಸಬೇಕೆಂದು ಮನವಿ ಮಾಡಿದ್ದು,ಈ ಯೋಜನೆಗೆ ಕೇಂದ್ರ ಸಚಿವರು ಒಪ್ಪಿಗೆ ನೀಡಿದ್ದಾರೆ. ಒಳರೋಗಿಗಳ ಸಂಖ್ಯೆಯ ಆಧಾರದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯಾವುದಾದರೂ ಒಂದು ತಾಲೂಕಿನಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು ಕ್ರೀಡಾಂಗಣಕ್ಕೆ ₹50 ಕೋಟಿಇದೇ ವೇಳೆ ಕ್ಷೇತ್ರಕ್ಕೆ ಕ್ರೀಡಾಂಗಣಗಳ ಅಗತ್ಯದ ಕುರಿತು ಡಾ.ಕೆ.ಸುಧಾಕರ್ ಪ್ರಸ್ತಾಪಿಸಿದರು. ಖೇಲೋ ಇಂಡಿಯಾ ಯೋಜನೆಯಡಿ, ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರದಲ್ಲಿ, ಒಟ್ಟು ಎರಡು ಕ್ರೀಡಾಂಗಣ ನಿರ್ಮಿಸಲು ಸಚಿವ ಮನ್ಸುಖ್ ಮಾಂಡವೀಯ ಒಪ್ಪಿಗೆ ನೀಡಿದರು. ಇದಕ್ಕಾಗಿ ವರ್ಷಕ್ಕೆ 10 ಕೋಟಿ ರೂ. ನಂತೆ, ಎರಡು ಕ್ರೀಡಾಂಗಣಗಳಿಗೆ ತಲಾ 50 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು ಎಂದು ತಿಳಿಸಿದರು.