ಶಿಕ್ಷಕರಿಗೆ ಡಿಡಿಪಿಒ ಪುಟ್ಟಸ್ವಾಮಿ ಸಲಹೆ । ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪದಲ್ಲಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಬಹಳ ಕಡಿಮೆ ಬಂದಿದ್ದು, ಫಲಿತಾಂಶ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಹೊಣೆಗಾರಿಕೆ ಇಲಾಖೆ ನಮ್ಮೆಲ್ಲರಿಗೂ ವಹಿಸಿದೆ. ಇದಕ್ಕೆ ಮುಖ್ಯವಾಗಿ ವಿದ್ಯಾರ್ಥಿಗಳ ಸಹಕಾರಬೇಕು. ಇಲ್ಲದಿದ್ದರೇ ಏಕಮುಖ ಶ್ರಮ, ಬದ್ಧತೆ ಉಪಯೋಗ ಆಗುವುದಿಲ್ಲ ಎಂದರು.ಫಲಿತಾಂಶ ಹೆಚ್ಚಳಕ್ಕೆ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಜತೆಗೆ ಗುಂಪು ಓದು, ಚರ್ಚೆ ಮೂಲಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸನ್ನದ್ಧರನ್ನಾಗಿಸಲಾಗುತ್ತಿದೆ. ಇಲಾಖೆ ನೀಡಿದ ಗುರಿ ಮುಟ್ಟುವ ಹೊಣೆಗಾರಿಕೆ ಗುರುಗಳ ಮೇಲಿದ್ದರೇ, ಭವಿಷ್ಯ ರೂಪಿಸಿಕೊಳ್ಳುವ ಗುರಿ ನಿಮ್ಮಲ್ಲಿರಬೇಕು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಸರ್ಕಾರಿ ಸೇರಿ ವಿವಿಧ ಸಂಸ್ಥೆಗಳು, ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಆದರೂ ಸರ್ಕಾರಿ ಶಾಲೆ ಎಂದಾಕ್ಷಣ ಮೂಗು ಮುರಿಯುವ ಜನರೇ ಹೆಚ್ಚು. ಈ ಮನಸ್ಥಿತಿಯಿಂದ ಜನ ಹೊರಬರಬೇಕು ಎಂದು ಹೇಳಿದರು.
ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರ ಬಿ.ಆರ್.ಶಿವಕುಮಾರ್ ಮಾತನಾಡಿ, ಓದು ಸಹಜವಾಗಿರಬಾರದು. ಓದಿದ್ದನ್ನು ಸದಾ ಮನನ ಮಾಡಿಕೊಳ್ಳಬೇಕು. ಕಲಿಕೆ ಹೇಗಿರಬೇಕು, ನೆನಪಿನ ಶಕ್ತಿ ವೃದ್ಧಿಸಿಕೊಳ್ಳುವುದು ಹೇಗೆ ಎಂಬ ವಿಷಯ ತಿಳಿದಿರಬೇಕು. ಆಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.