ಹೊಸಕೋಟೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ: ಬಿ.ಎಸ್.ರಾಜಶೇಖರಯ್ಯ

KannadaprabhaNewsNetwork |  
Published : Jul 25, 2025, 12:30 AM IST
ಫೋಟೋ : 24 ಹೆಚ್‌ಎಸ್‌ಕೆ 2 ಹೊಸಕೋಟೆ ಲಯನ್ಸ್ ಕ್ಲಬ್ 52ನೇ ಅಧ್ಯಕ್ಷರಾಗಿ ಅನಿಲ್‌ಕುಮಾರ್ ಹೆಚ್‌ಎಸ್ ಆಯ್ಕೆಯಾಗಿದ್ದು ನಗರದ ಖಾಸಗಿ ಸಭಾಭವನದಲ್ಲಿ ಲಯನ್ಸ್ ಪಾಸ್ಟ್ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಬಿಎಸ್ ರಾಜಶೇಖರಯ್ಯ ನೇತೃತ್ವದಲ್ಲಿ ಪದಗ್ರಹಣ ಮಾಡಿದರು. | Kannada Prabha

ಸಾರಾಂಶ

ಈ ಹಿಂದೆ ಲಯನ್ಸ್ ಕ್ಲಬ್‌ನಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದೇನೆ. ಈಗ ೫೨ನೇ ಅಧ್ಯಕ್ಷನಾಗಿದ್ದೇನೆ. ಮಾಡಬೇಕಾದ ಸೇವಾ ಚಟುವಟಿಕೆಗಳ ಪಟ್ಟಿ ಸಿದ್ದಪಡಿಸಿಕೊಂಡಿದ್ದೇನೆ. ಅದಕ್ಕೆ ಎಲ್ಲಾ ಸದಸ್ಯರ ಸಹಕಾರ ಅಗತ್ಯ.

ಹೊಸಕೋಟೆ: ತಾಲೂಕಿನಲ್ಲಿ ಸಾಕಷ್ಟು ರೋಗಿಗಳು ಡಯಾಲಿಸಿಸ್‌ಗಾಗಿ ಬೆಂಗಳೂರು ನಗರಕ್ಕೆ ತೆರಳುತ್ತಿದ್ದು ಲಯನ್ಸ್ ವತಿಯಿಂದ ನಗರದಲ್ಲಿ ಉಚಿತ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಿ ಎಂದು ಲಯನ್ಸ್ ಪಾಸ್ಟ್ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಬಿ.ಎಸ್.ರಾಜಶೇಖರಯ್ಯ ತಿಳಿಸಿದರು.

ಹೊಸಕೋಟೆ ಲಯನ್ಸ್ ೫೨ನೇ ಅಧ್ಯಕ್ಷ ಅನಿಲ್ ಕುಮಾರ್ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ ಹಲವಾರು ರೀತಿಯ ಸೇವಾ ಕಾರ್ಯಕ್ರಮಗಳನ್ನು 51 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಆರೋಗ್ಯ, ಶಿಕ್ಷಣ, ಹಸಿವು ಮುಕ್ತ ಸಮಾಜ ಸೇರಿದಂತೆ ಹಲವಾರು ರೀತಿಯ ಸಾರ್ಥಕ ಕೆಲಸಗಳನ್ನು ಮಾಡಿದೆ. ಅನಿಲ್ ಕುಮಾರ್‌ ಅವಧಿಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರವನ್ನ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

52ನೇ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಈ ಹಿಂದೆ ಲಯನ್ಸ್ ಕ್ಲಬ್‌ನಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದೇನೆ. ಈಗ ೫೨ನೇ ಅಧ್ಯಕ್ಷನಾಗಿದ್ದೇನೆ. ಮಾಡಬೇಕಾದ ಸೇವಾ ಚಟುವಟಿಕೆಗಳ ಪಟ್ಟಿ ಸಿದ್ದಪಡಿಸಿಕೊಂಡಿದ್ದೇನೆ. ಅದಕ್ಕೆ ಎಲ್ಲಾ ಸದಸ್ಯರ ಸಹಕಾರ ಅಗತ್ಯ ಎಂದರು.

ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸಯ್ಯ, ಲಯನ್ಸ್ 2ನೇ ಉಪರಾಜ್ಯಪಾಲ ಎ.ವಿಜಯಕುಮಾರ್, ವಲಯ ಅಧ್ಯಕ್ಷ ಪ್ರಭಾಕರ್, ಪ್ರಾಂತೀಯ ಅಧ್ಯಕ್ಷ ಡಬ್ಲ್ಯೂ.ಡಿ.ವಿಜಯಕುಮಾರ್, ಪಿಆರ್‌ಒ ಮಂಜುನಾಥ್, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸಯ್ಯ, ಲಯ್ನಸ್ ಕ್ಲಬ್ ಉಪಾಧ್ಯಕ್ಷ ವಿಎನ್ ಮಂಜುನಾಥ್, ಕಾರ್ಯದರ್ಶಿ ದಿನಕರ್ ಬಿ.ಎಸ್, ಖಜಾಂಚಿ ಮಹೇಶ್, ನಿರ್ದೇಶಕ ಮುರಲೀಧರ್ ಹಾಗು ಪದಾಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ