ಕನಕಪುರ: ಜಾನಪದ ಕಲೆ ಮತ್ತು ಕಲಾವಿದರ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ಇಲಾಖೆ ಸ್ಥಾಪಿಸುವ ಅಗತ್ಯವಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಐಸಿಸಿಆರ್ ಸದಸ್ಯ ಡಾ.ಎಸ್ ಬಾಲಾಜಿ ತಿಳಿಸಿದರು.
ಪರಿಸರ ಪ್ರೇಮಿ, ಲಯನ್ಸ್ ಸಂಸ್ಥೆ ಸದಸ್ಯ ಮರಸಪ್ಪರವಿ ಮಾತನಾಡಿ, ಇಂದು ವಿದ್ಯಾರ್ಥಿ ಯುವ ಸಮುದಾಯ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಮಾನವೀಯ ಮೌಲ್ಯ ಬಿತ್ತುವ ಜಾನಪದ ಸೇವೆ ಶ್ಲಾಘನೀಯ ಎಂದರು.
ಇದೇ ವೇಳೆ ದುಬೈ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಜಾನಪದ ಕಲಾವಿದರಾದ ಕೆ ನಾಗರಾಜ, ಡಾ.ಬಿ.ಆರ್.ಶಿವಕುಮಾರ್, ಅರುಣ್ ವೇ. ಚಿ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಕೆ ನಾಗರಾಜು, ಕಜಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕನಕತಾರ, ವಿಭಾಗೀಯ ಸಂಚಾಲಕ ಎ.ಪಿ.ಕುಮಾರ್, ಜಿಲ್ಲಾಧ್ಯಕ್ಷ ಕೆ ಸಿ ಕಾಂತಪ್ಪ, ಕಾರ್ಯಾಧ್ಯಕ್ಷ ಡಾ.ಚಂದ್ರ, ತಾಲೂಕು ವೈದ್ಯಾಧಿಕಾರಿ ಜೆ ಈ ರಾಜು, ಎನ್ಎಸ್ಎಸ್ ಸಲಹಾ ಸಮಿತಿ ಸದಸ್ಯ ಡಾ. ಎಂ ಕೃಷ್ಣ, ಮುಖ್ಯಶಿಕ್ಷಕ ರಾಜೇಶ್ ಹಾಜರಿದ್ದರು.
(ಫೋಟೋ ಕ್ಯಾಫ್ಷನ್)
ಕನಕಪುರದಲ್ಲಿ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ನಡೆಯಿತು.