ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕಳೆದ 25 ವರ್ಷಗಳಿಂದ ರಾಜ್ಯದಾದ್ಯಂತ ಯುವ ಸಂಘಟನೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿಕೊಂಡು ರಾಜ್ಯದಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ನಿರಂತರ ಮಾಡುತ್ತಿದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೇಲೆ ಸತತವಾಗಿ ಯುವಜನರ ಕುರಿತು ಬೇಡಿಕೆ, ಮನವಿ, ಒತ್ತಾಯದ ಮೂಲಕ ಹಲವಾರು ಯೋಜನೆಗಳನ್ನು ಉಳಿಸಿಕೊಂಡಿದೆ. ಆದರೆ ಹಿಂದಿನ ಬಿಜೆಪಿ ಹಾಗೂ ಈಗಿನ ಸರ್ಕಾರ ಎಲ್ಲಾ ಯುವ ಸಂಘಗಳನ್ನು ರದ್ದುಗೊಳಿಸುವ ಮೂಲಕ ಯುವ ಜನರನ್ನು ಮತ್ತು ಅವರ ಸಾಧನೆಗಳನ್ನು ಮೂಲೆಗುಂಪು ಮಾಡಿದೆ. ಅಲ್ಲದೇ ಯುವ ಚಿಂತಕರಿಗೆ ಸಿಗಬೇಕಾದ ಸ್ಥಾನಮಾನ ನೀಡದೇ ಅಪಮಾನಿಸಿದೆ. ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಸದ್ಯ ನಮ್ಮ ಒಕ್ಕೂಟ ಹಲವು ಕಾರ್ಯಕ್ರಮ ಆಯೋಜಿಸಿ ಪ್ರತಿ ಜಿಲ್ಲೆಯಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಸೇರಿದಂತೆ ಹಲವಾರು ಯೋಜನೆಗಳನ್ನು ಸಂಘಟನೆ ರೂಪಿಸಿದೆ. ಸರ್ಕಾರ ಸಂಘಟನೆಗೆ ಸ್ಪಂದಿಸಿ ಆರ್ಥಿಕ ಸಹಾಯ ಜತೆಗೆ ಕರ್ನಾಟಕ ರಾಜ್ಯ ಯುವ ನೀತಿ ಜಾರಿಗೊಳಿಸುವ ಮೂಲಕ ಕ್ರೀಡೆಯ ಜೊತೆಗೆ ಯುವಜನರ ಸಬಲೀಕರಣವನ್ನು ಮಾಡಬೇಕು ಎಂದು ಒತ್ತಾಯಿಸಿದರು.ರಾಜ್ಯ ಯುವ ಸಂಘಗಳ ಒಕ್ಕೂಟದ ವಿಜಯಪುರ ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ ಮಾತನಾಡಿ, ಸದ್ಭಾವನಾ ಪ್ರಶಸ್ತಿ ಸಮಾರಂಭ ಜತೆಗೆ ಯುಜನ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ವಾಮಿ ವಿವೇಕಾನಂದ ಭವ್ಯ ಮೆರವಣಿಗೆ ನಡೆಸಲಾಗುವುದು. ವಿವಿಧ ಜಾನಪದ, ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಲಿವೆ. ಕಾರಣ ತಾಲೂಕಿನ ಯುವ ಮಿತ್ರರು ಗಣ್ಯರು, ಮಹಿಳಾ ಸಾಧಕರು, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಶ್ವಿಗೊಳಿಸಬೇಕು ಎಂದು ಕರೆ ನೀಡಿದರು.
ವಿಜಯಪುರ ಜಿಲ್ಲಾ ಹಾಗೂ ಮುದ್ದೇಬಿಹಾಳ ತಾಲೂಕು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ, ಜಾನಪದ ಯುವ ಘಟಕ ಹಾಗೂ ಸಾಧನಾ ಮಹಿಳಾ ಒಕ್ಕೂಟಗಳ ಆಶ್ರಯದಲ್ಲಿ ಜ.31ರಂದು ಸಂಜೆ ವಿಬಿಸಿ ಹೈಸ್ಕೂಲ್ನ ಸಿದ್ದೇಶ್ವರ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರವರ 163ನೇ ಜಯಂತ್ಯುತ್ಸವ ಹಾಗೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಷ್ಟ್ರೀಯ ಯುವ ವೈಭವ, ವಿವೇಖ ಯುವ ಚೈತನ್ಯ ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರಿಗೆ ಪ್ರಶಸ್ತಿ ನೀಡುವ ಮೂಲಕ ಗೌರವಿಸಲು ತಿರ್ಮಾನಿಸಿದೆ.- ಡಾ.ಎಸ್.ಬಾಲಾಜಿ, ರಾಜ್ಯಾಧ್ಯಕ್ಷ, ರಾಜ್ಯ ಯುವ ಸಂಘಗಳ ಒಕ್ಕೂಟ