ಹೊಸ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ

KannadaprabhaNewsNetwork |  
Published : Nov 22, 2023, 01:00 AM IST
21 ಆಲಮಟ್ಟಿ 1: ಪ್ರವಾಸೋದ್ಯಮ ಇಲಾಖೆಯ ವಿಶೇಷ ಬಸ್ ನಲ್ಲಿ ಮಂಗಳವಾರ ಆಲಮಟ್ಟಿಯಿಂದ-ವಿಜಯಪುರ ಮಾರ್ಗ ಮಧ್ಯೆ ಕಾನೂನು, ಸಂಸದೀಯ ವ್ಯಹಾರಗಳ ಸಚಿವ ಎಚ್.ಕ.ಎ ಪಾಟೀಲ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಹೊಸ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಹೊಸದಾಗಿ ರಚನೆಯಾಗಿರುವ 43 ತಾಲೂಕು ಕೇಂದ್ರಗಳಲ್ಲಿ ನ್ಯಾಯಾಲಯ ಸ್ಥಾಪಿಸಲಾಗುವುದು. ಶೀಘ್ರವೇ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪುರೇಷೆ ಆರಂಭಿಸಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ವಿಶೇಷ ಬಸ್‌ನಲ್ಲಿ ಮಂಗಳವಾರ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ 100 ಕಡೆ ಗ್ರಾಮ ನ್ಯಾಯಾಲಯ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಅದರ ಸ್ವರೂಪದ ಬಗ್ಗೆ ಸಿದ್ಧತೆ ಆರಂಭಗೊಂಡಿದೆ ಎಂದು ತಿಳಿಸಿದರು.

ಕೃಷ್ಣಾ ಜಲ ವಿವಾದ ಕುರಿತು ಸುಪ್ರೀಂಕೋರ್ಟ್‌ನಲ್ಲಿದೆ. ಡಿಸೆಂಬರ್ ತಿಂಗಳಲ್ಲಿ ಕೃಷ್ಣಾ ಜಲ ವಿವಾದದ ವಾದಗಳು ನಡೆಯಲಿದೆ. ವಕೀಲರ ತಂಡದ ಜತೆ ಚರ್ಚೆ ನಡೆಸಲಾಗಿದೆ ಎಂದರು.

ಬಿಜೆಪಿ ಮತ ಕೇಳುವ ನೈತಿಕತೆ ಇಲ್ಲ:

ಕೃಷ್ಣಾ ನ್ಯಾಯಾಧಿಕರಣ ತೀರ್ಪು ಬಂದು ದಶಕ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ, ಅದರಲ್ಲೂ ರೈತರಿಗೆ ಮಾಡಿದ ಅನ್ಯಾಯ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ ಕೇಳುವ ನೈತಿಕತೆ ಇಲ್ಲ ಎಂದರು.

ರೋಪ್ ವೇ:

ಪ್ರವಾಸಿ ತಾಣವಾಗಿ ಅಭಿವೃದ್ಧಿ ಹೊಂದುತ್ತಿರುವ ಆಲಮಟ್ಟಿಯಲ್ಲಿ ರೋಪ್ ವೇ ಮಾರ್ಗ ನಿರ್ಮಿಸಲಾಗುವುದು. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ, ಇಲ್ಲಿಯ ಕೃಷ್ಣಾ, ರಾಕ್, ಸಂಗೀತ ಕಾರಂಜಿ, ಮೊಘಲ್ ಉದ್ಯಾನ ನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಈಗ ರೋಪ್ ವೇ ನಿರ್ಮಾಣದಿಂದ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತದೆ ಎಂದು ಹೇಳಿದರು.

ಸರ್ಕಿಟ್ ರಚಿಸಿ ಯಾತ್ರಿ ನಿವಾಸ:

ಹಂಪಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹೊಸಪೇಟೆ, ಕೂಡಲಸಂಗಮ, ಆಲಮಟ್ಟಿ, ವಿಜಯಪುರ ಮಧ್ಯೆ ಪ್ರವಾಸಿ ಸರ್ಕೀಟ್ ರಚಿಸಿ ಯಾತ್ರಿ ನಿವಾಸ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿ ಪಡಿಸಲಾಗುವುದು, ಜತೆಗೆ ಪ್ರಚಾರಕ್ಕೂ ಆದ್ಯತೆ ನೀಡಲಾಗುವುದು. ಆಲಮಟ್ಟಿಯ ಹಿನ್ನೀರಿನಲ್ಲಿ ಹಸಿರು ಟೂರಿಸ್ಂ ಗೂ ಆದ್ಯತೆ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಮ ಪ್ರಸಾದ ಮನೋಹರ,ಪುರಾತತ್ವ ಇಲಾಖೆಯ ರಾಜ್ಯ ಆಯುಕ್ತ ದೇವರಾಜು, ಶಶಿಕಾಂತ ಮಾಲಗತ್ತಿ, ಸಂದೀಪ ಬೆಳಗಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌