ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದರೂ ಸಹ ಸಾರ್ವಜನಿಕರ ಮಾಹಿತಿಗಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ದೂರವಾಣಿ ಸಂಖ್ಯೆ 08158-256764 ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ತಾಲೂಕಿನ 11 ಗ್ರಾಮಗಳು ಹಾಗೂ ನಗರದ ವಿವಿಧ ವಾರ್ಡುಗಳಿಗೆ ಎಂಟು ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿಯೂ ಸಹ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.