ಕನ್ನಡಪ್ರಭ ವಾರ್ತೆ ರಾಮದುರ್ಗ
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಭವನದಲ್ಲಿ ಟಿಎಪಿಸಿಎಂಸ್ ಸಹಯೋಗದಲ್ಲಿ ಕರ್ನಾಟಕ ಸಹಕಾರ ಮಹಾ ಮಂಡಳದಿಂದ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ ಮತ್ತು ಪ್ರಾದೇಶಿಕ ಎಣ್ಣೆ ಬೆಳೆಗಾರರ ಸಹಕಾರ ಸಂಘದ ಸಹಯೋಗದಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಗಳು ಜಾರಿಗೆ ತರುವ ಜನಪರ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಮತ್ತು ಜನಸಾಮಾನ್ಯರಿಗೆ ತಲುಪಿಸಲು ಪಂಚಾಯಿತಿ ಮಟ್ಟದಲ್ಲಿ ಸೂಕ್ತ ಪ್ರಚಾರ ಮಾಡಿದರೆ ಮಾತ್ರ ಸದ್ಬಳಕೆಯಾಗಲು ಸಾಧ್ಯವಿದೆ. ಅಧಿಕಾರಿಗಳು ಸರಿಯಾಗಿ ಪ್ರಚಾರ ಮಾಡಿ ಎಲ್ಲರೂ ಯೋಜನೆಯ ಲಾಭ ಪಡೆಯುವಂತೆ ಮಾಡಬೇಕೆಂದರು. ಮಳೆಗೆ ಹಾನಿಯಾದ ರೈತರ ಬೆಳೆಗೆ ಯೋಗ್ಯ ಪರಿಹಾರ ದೊರಕಲು ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಯಾವ ರೈತರಿಗೂ ಅನ್ಯಾಯವಾದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ಸಹಾಯಕ ಕೃಷಿ ನಿರ್ದೇಶಕ ಎಫ್.ಎಸ್.ಬೆಳವಟಗಿ ಮಾತನಾಡಿ, ಸರ್ಕಾರ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿ ಮಾಡುತ್ತಿದೆ. ಗುಣಮಟ್ಟದ ಬೆಳೆಗೆ ಉತ್ತಮ ಬೆಲೆ ದೊರೆಯುತ್ತಿದೆ ಎಂದರು.
ಈ ವೇಳೆ ರೈತರಿಗೆ ರಿಯಾಯತಿ ದರದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ಅಶೋಕ ಪಟ್ಟಣ ವಿತರಿಸಿದರು. ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕರಾದ ಬಿ.ಎಸ್. ಬೆಳವಣಕಿ, ಕುಬೇರಗೌಡ ಪಾಟೀಲ, ಎಪಿಎಂಸಿ ಕಾರ್ಯದರ್ಶಿ ಶಿವಾನಂದ ಮಠ, ಪರಪ್ಪ ಜಂಗವಾಡ ಶಿವಾನಂದ ಚಿಕ್ಕೋಡಿ ಸೇರಿದಂತೆ ಹಲವರಿದ್ದರು.