ಕನ್ನಡಪ್ರಭ ವಾರ್ತೆ ಮಾಲೂರು
ಹುದ್ದೆಗಳ ಭರ್ತಿಗೆ ಕ್ರಮ
ಇಲ್ಲಿ ದಾಖಲೆಯ ಹೊರರೋಗಿಗಳ ನೋಂದಣಿಯಾಗುತ್ತಿದ್ದು, ಹೈಟೆಕ್ ಆಸ್ಪತ್ರೆ ಅತಿ ಜರೂರಾಗಿ ಬೇಕಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಯಲ್ಲಿ ಇಬ್ಬರು ಗೈನೋಕಲಿಜಿಸ್ಟ್, ಇಬ್ಬರು ಅರಿವಳಿಕೆ ತಜ್ಞ,ಎರಡು ಮಕ್ಕಳ ತಜ್ಞರನ್ನು ಕಡ್ಡಾಯ ವಾಗಿ ನೇಮಿಸುವ ಜತೆಯಲ್ಲಿ ಖಾಲಿ ಇರುವ ಎಲ್ಲ ದರ್ಜೆಗಳ ಹುದ್ದೆಯನ್ನು ಭರ್ತಿ ಮಾಡುವ ಚಿಂತನೆ ಸರ್ಕಾರದ ಮುಂದಿದ್ದು ,ಶೀಘ್ರವಾಗಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.ವೈದ್ಯರ ಸೇವೆಗೆ ಶ್ಲಾಘನೆ
ಈ ಸಂದರ್ಭದಲ್ಲಿ ಸಚಿವ ಜತೆ ಶಾಸಕ ಕೆ.ವೈ.ನಂಜೇಗೌಡ, ಡಿಹೆಚ್ ಓ ಡಾ.ಶ್ರೀನಿವಾಸ್ ,ತಾಲೂಕು ವೈದ್ಯಾಧಿಕಾರಿ ಡಾ.ರಮೇಶ್ ಬಾಬು,ಆಸ್ವತ್ರೆ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ,ಡಾ.ಶ್ರೀನಿವಾಸ್, ಡಾ.ಚೆನ್ನಕೇಶವ, ಡಾ.ಮಂಜುನಾಥ್, ಡಾ.ಮಧುಸೂಧನ್ ಸೇರಿದಂತೆ ಮತ್ತಿತರರು ಉಫಸ್ಥಿತರಿದ್ದರು.
ನಕ್ಸಲರು ಮುಖ್ಯವಾಹಿನಿಗೆ ಬರಬೇಕು, ಸಮಾಜದಲ್ಲಿ ಶಾಂತಿ ಸ್ಥಾಪನೆ ಆಗಬೇಕು ಎಂಬ ಉದ್ದೇಶದಿಂದ ನಕ್ಸಲರ ಶರಣಾಗತಿಗೆ ವ್ಯವಸ್ಥೆ ಮಾಡಿದರೆ ಅದರಲ್ಲೂ ಬೆಂಕಿ ಹಚ್ಚುವ ಕೆಲಸ ಬಿಜೆಪಿಗರು ಮಾಡುತ್ತಿದ್ದಾರೆ. ಅವರಿಗೆ ಶಾಂತಿ ನೆಮ್ಮದಿ ಬೇಕಿಲ್ಲ, ಹಿಂಸೆ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದರು. ಅವರು ಮಾಲೂರು ತಾಲೂಕಿನ ಲಿಂಗಾಪುರದಲ್ಲಿ ದಿ.ವಿಕ್ರಂ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಸರ್ಕಾರಿ ಆಸ್ವತ್ರೆಗೆ ಎರಡು ಆ್ಯಂಬುಲೆನ್ಸ್ , ರಕ್ತದಾನ ಶಿಬಿರ ಹಾಗೂ ಹೆಲ್ಮಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಕ್ಸಲ್ ರ ಶರಣಾಗತಿ ಬಗ್ಗೆ ಮಾತನಾಡುವ ಮುನ್ನ ೨೦೨೬ ರೊಳಗೆ ದೇಶವನ್ನು ನಕ್ಸಲ್ ಮುಕ್ತ ಮಾಡುತ್ತೇವೆ ಎಂದಿರುವ ಅಮಿತ್ ಶಾ ಹಾಗೂ ಪ್ರಧಾನಿಯನ್ನು ಕೇಳಿ ನಂತರ ಹೇಳಿಕೆಗಳನ್ನು ನೀಡಲಿ ಎಂದರು.ಬಣ ಶಕ್ತಿ ಪ್ರದರ್ಶನ ಅಲ್ಲ
ಕಾಂಗ್ರೆಸ್ ನ ಎಸ್ಸಿಎಸ್ಟಿ ಶಾಸಕರ ಸಭೆ ಮುಂದೂಡಿದ್ದ ಬಗ್ಗೆ ಉತ್ತರಿಸಿದ ಆರೋಗ್ಯ ಸಚಿವರು, ಸಚಿವ ಕೆ.ಎನ್.ರಾಜಣ್ಣ ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೋತ್ತಿಲ್ಲ. ಸಭೆ ನಡೆಸುವುದು, ಸಭೆ ಮುಂದೂಡುವುದು ಪಕ್ಷದ ಅಂತರಿಕ ವಿಚಾರ. ಈ ಬಗ್ಗೆ ಈಗಾಗಲೇ ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ನಾನು ಹೆಚ್ಚಾಗಿ ಮಾತನಾಡುವುದಿಲ್ಲ ಎಂದರು.ಅಶ್ವತ್ಥ್ ನಾರಾಯಣ್ಗೆ ತಿಳಿವಳಿಕೆ ಇಲ್ಲ