ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ರೈತ ಸಂಘದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾಧಿಕಾರಿಗಳು ಕಾರ್ಖಾನೆ ಪರನಿಂತು ಮಾ.6 ರಂದು ಸಭೆ ಕರೆದಿರುವುದನ್ನು ತಕ್ಷಣವೇ ರದ್ದುಪಡಿಸುವಂತೆ ಆಗ್ರಹಿಸಿದರು.
ಕಾರ್ಖಾನೆ ಹೇಮಾವತಿ ನದಿ ದಂಡೆಯಲ್ಲಿರುವ ಕಾರಣ ಈಗಾಗಲೇ ಇಲ್ಲಿ ಪರಿಸರ ಮಾಲಿನ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹಾರುಬೂದಿ ಸಮಸ್ಯೆ, ತ್ಯಾಜ್ಯ ನೀರಿನ ಸಮಸ್ಯೆಗಳು ಈ ಭಾಗದ ಜನರನ್ನು ಕಾಡುತ್ತಿವೆ ಎಂದರು.ಕಾರ್ಖಾನೆಯ ನೂತನ ಘಟಕಗಳಿಗೆ ಜನಾಭಿಪ್ರಾಯ ವಿರುದ್ಧವಾಗಿರುವುದು ಗೊತ್ತಿದ್ದರೂ ನ್ಯಾಯಾಲಯಕ್ಕೆ ನೀಡಿದ್ದ ಮಾತಿನಂತೆ ನಡೆದುಕೊಳ್ಳದೆ ಎಥೆನಾಲ್ ಮತ್ತು ಡಿಸ್ಟಿಲರಿ ಘಟಕ ಸ್ಥಾಪನೆಗೆ ಮುಂದಾಗಿದ್ದು ಇದು ಈ ಭಾಗದ ರೈತರ ಬದುಕಿಗೆ ಮರಣ ಶಾಸನವಾಗಲಿದೆ ಎಂದು ಎಚ್ಚರಿಸಿದರು.
ಡಿಸ್ಟಿಲರಿ ಸ್ಥಾಪಿಸಲು ಅನುವು ಮಾಡಿಕೊಡುವ ಏಕೈಕ ದುರುದ್ದೇದಿಂದ ಮಾ.6 ರಂದು ಜನಾಭಿಪ್ರಾಯ ಸಂಗ್ರಹದ ಹೆಸರಿನಲ್ಲಿ ಸಾರ್ವಜನಿಕ ಸಭೆ ಕರೆದಿದೆ. ಇದು ಹಸಿರು ನ್ಯಾಯಪೀಠಕ್ಕೆ ತೋರಿಸುತ್ತಿರವ ಅಗೌರವವಾಗಿದೆ. ಕೂಡಲೇ ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಪರಿಸರ ಸಂರಕ್ಷಣೆಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಹೋರಾಟಗಾರರಾದ ಕರೋಟಿ ತಮ್ಮಯ್ಯ, ಅಕ್ಕಿಮಂಚನಹಳ್ಳಿ ಹೊನ್ನೇಗೌಡ, ಕೃಷ್ಣೇಗೌಡ ಇದ್ದರು.