ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಲೋಕಾಯಾನ ಕಲ್ಚರಲ್ ಫೌಂಡೇಶನ್, ಹೇಮಾವತಿ ಹೊನ್ನಾರು ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಉದಯರವಿ ಟ್ರಸ್ಟ್ ಆಯದಲ್ಲಿ ಲೇಖಕಿ ಎಚ್.ಎಸ್.ಪಾರ್ವತಿ ಅವರ ನೆನಪಿನ ಉಪನ್ಯಾಸ, ಪುಸ್ತಕ ಬಿಡುಗಡೆ ಹಾಗೂ ತಾಲೂಕು ಲೇಖಕಿಯರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ತಾಯಿ, ಮಡದಿ, ಸಹೋದರಿ, ಮಗಳಾಗಿ ಸಮಾಜದ ಎಲ್ಲಾ ಸ್ತರಗಳಲ್ಲಿ ಕೆಲಸ ಮಾಡಿ ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ತನ್ನ ಪಾಲನ್ನು ನೀಡುತ್ತಿರುವ ಹೆಣ್ಣು ಮಕ್ಕಳ ಮೇಲೆ ಶೋಷಣೆಯು ನಿರಂತರವಾಗಿ ನಡೆಯುತ್ತಿದೆ ಎಂದು ವಿಷಾದಿಸಿದರು.ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗು ಇಂದಿಗೂ ಜೀವಂತವಾಗಿದೆ. ಹೆಣ್ಣು ಮಕ್ಕಳನ್ನು ಪೂಜಿಸಿ ಗೌರವಿಸುವ ಸಂಸ್ಕೃತಿಯನ್ನು ಹೊಂದಿರುವ ಭಾರತ ದೇಶದಲ್ಲಿಯೂ ನಾರಿಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕು ಎಂದು ಎಂದು ಕರೆ ನೀಡಿದರು.
ನಾಡಿನ ಖ್ಯಾತ ಸಾಹಿತಿ ನಿರಂಜನ ಅವರ ಪ್ರೋತ್ಸಾಹ ಹಾಗೂ ಪ್ರಭಾವ ದಿಂದ ಅನುವಾದಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಿಂದಿ ಮತ್ತು ಕನ್ನಡ ಭಾಷೆ ಮೇಲೆ ಪ್ರಭುತ್ವ ಸಾಧಿಸಿ ಕತೆ, ಕಾದಂಬರಿ, ವಿಚಾರ ಸಾಹಿತ್ಯ ಗಳನ್ನು ಅನುವಾದ ಮಾಡುವ ಜೊತೆಗೆ ಪತ್ರಿಕೆಗಳಲ್ಲಿ ಸ್ತ್ರೀ ಪರವಾದ ಲೇಖನಗಳನ್ನು ಬರೆದು ಸಮಾಜವನ್ನು ಎಚ್ಚರಿಸಿದರು.
ಅನುಪಮಾ ಪ್ರಶಸ್ತಿ, ಉತ್ತರ ಪ್ರದೇಶ ಸರ್ಕಾರದ ಸೌಹಾರ್ಧ ಸಮ್ಮಾನ್ ಸಾಹಿತ್ಯ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಫೆಲೋಶಿಪ್, ಕರ್ನಾಟಕ ಅನುವಾದ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಪಾರ್ವತಿ ಅವರ ಜೀವನದ ಆದರ್ಶಗಳು ದಾರಿ ದೀಪವಾಗಿವೆ ಎಂದರು.
ಬೆಂಗಳೂರಿನ ಅಬ್ಬಾಸ್ಖಾನ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ಎಸ್.ವಿದ್ಯಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡ ಎ.ಆರ್.ರಘು, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಲೇಖಕಿ ಸವಿತಾ ರಮೇಶ್, ರಂಗಕರ್ಮಿ ಶಶಿಧರ ಭಾರೀಘಾಟ್, ಲೇಖಕ ಶಿ.ಕುಮಾರಸ್ವಾಮಿ, ಉದಯರವಿ ಟ್ರಸ್ಟ್ ಕಾರ್ಯದರ್ಶಿ ಕತ್ತರಘಟ್ಟ ವಾಸು ಮಾತನಾಡಿದರು.