ಕನ್ನಡಪ್ರಭ ವಾರ್ತೆ ಹೊನ್ನಾಳಿ
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಅರಕೆರೆ, ಹಿರೇಗೋಣಿಗೆರೆ, ಬೇಲಿಮಲ್ಲೂರು ಗ್ರಾಮಗಳಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಮತಯಾಚಿಸಿ ಮಾತನಾಡಿದ ಅವರು, ಮೋದಿ ಅವರಂಥ ನಾಯಕ ಬೇರೆ ದೇಶದಲ್ಲಿ ಜನಿಸಿದ್ದರೆ ದೇಶದ ಜನರೆಲ್ಲರೂ ಅವರನ್ನು ಪೂಜಿಸುತ್ತಿದ್ದರು. ಇಂತಹ ಮೇರು ವ್ಯಕ್ತಿತ್ವದ ಮೋದಿ ಅವರನ್ನು ವಿರೋಧಿಸುವಂತಹ ಮಾನಸಿಕ ಸ್ಥಿತಿ ಕೆಲವರಲ್ಲಿದೆ. ಇಂತಹ ಮನಸ್ಥಿತಿ ಇರುವ ಕಾಂಗ್ರೆಸ್ ಪಕ್ಷದಿಂದ ದೇಶಕ್ಕೆ ಯಾವ ಲಾಭವಿದೆ ಎಂದು ಪ್ರಶ್ನಿಸಿದರು.
ಅರ್ಬನ್ ನಕ್ಸಲ್ ಮನಸ್ಥಿತಿ:ಕಾಂಗ್ರೆಸ್ನವರದ್ದು ಅರ್ಬನ್ ನಕ್ಸಲ್ ಮನಸ್ಥಿತಿ. ಈ ದೇಶದ ಸಂಪತ್ತಿನ ಹೆಚ್ಚಿನ ಪಾಲು ಮುಸ್ಲಿಮರಿಗೆ ಸಿಗಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಆರ್ಥಿಕ ಸರ್ವೆ ಮಾಡುವುದಾಗಿ ಹೇಳುತ್ತಿದ್ದಾರೆ. ಕಷ್ಟಪಟ್ಟು ನೀವು ದುಡಿದ ಆಸ್ತಿ ಕಂಡವರ ಪಾಲಾಗಲು ಯಾವುದೇ ಕಾರಣಕ್ಕೂ ಬಿಡಬೇಡಿ. ಆರ್ಥಿಕ ಸಮೀಕ್ಷೆ ನಡೆಸುತ್ತೇವೆ ಎನ್ನುವವರನ್ನು ಮನೆಗೆ ಕಳುಹಿಸಲು ಸಿದ್ಧರಾಗಿ ಎಂದು ತಿಳಿಸಿದರು.
ಮಂಡಲ ಅಧ್ಯಕ್ಷ ಸುರೇಶ್, ಬಿಜೆಪ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಬಿಜೆಪಿ ಮುಖಂಡ ಮಹೇಶ್, ಕುಬೇರಪ್ಪ, ಸಂತೋಷ ಕುಮಾರ್, ಎಲ್.ಕೆ. ಮಂಜಪ್ಪ, ಪ್ರಭು, ರವಿ, ಹೊನ್ನಪ್ಪ, ರಾಮಣ್ಣ, ಶಾಂತರಾಜ್ ಪಾಟೀಲ್, ಎ.ಬಿ. ಹನುಮಂತಪ್ಪ, ಅರೆಕೆರೆ ನಾಗರಾಜ್, ರಂಗನಾಥ್, ಸುರೇಂದ್ರ, ಯೋಗೇಶ್, ಮಂಡಲದ ಸದಸ್ಯರು, ಗ್ರಾ.ಪಂ. ಸದಸ್ಯರು, ಬೂತ್ಮಟ್ಟದ ಅಧ್ಯಕ್ಷರು, ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಇದ್ದರು.
- - - ಕೋಟ್ಕಾಂಗ್ರೆಸ್ ಸರ್ಕಾರ 60 ವರ್ಷಗಳ ಕಾಲ ಜನರ ಕೈಗೆ ಚೊಂಬು ಕೊಟ್ಟು ಬಯಲು ಶೌಚಾಲಯಕ್ಕೆ ಪ್ರೋತ್ಸಾಹ ನೀಡಿತ್ತು. ಮೋದಿ ನೇತೃತ್ವದ ಸರ್ಕಾರ ಕೇವಲ 5 ವರ್ಷಗಳಲ್ಲಿ ಸ್ವಚ್ಛಭಾರತ್ ಮಿಷನ್ ಯೋಜನೆ ಅಡಿ ಬಯಲು ಶೌಚಾಲಯ ಮುಕ್ತ ದೇಶವನ್ನಾಗಿ ಮಾಡಿ, ಮಹಿಳೆಯರ, ಪುರುಷರ ಗೌರವ ಉಳಿಸಲು ಶೌಚಾಲಯ ನಿರ್ಮಾಣ ಮಾಡಿಕೊಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲೇ 1.71 ಲಕ್ಷ ಶೌಚಾಲಯ ಕಟ್ಟಿಸಿಕೊಟ್ಟಿದ್ದಾರೆ. ಹೀಗಿದ್ದರೂ ಕಾಂಗ್ರೆಸ್ನವರು ಈಗಲೂ ಬೀದಿ ಬೀದಿಗಳಲ್ಲಿ ಚೊಂಬು ಹಿಡಿದುಕೊಂಡು ಓಡಾಡುತ್ತಿದ್ದಾರೆ
- ಗಾಯತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ- - - -26ಎಚ್.ಎಲ್.ಐ1:
ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರಿನಲ್ಲಿ ಬಿಜೆಪಿ ಅಭ್ಯರ್ತಿ ಗಾಯತ್ರಿ ಸಿದ್ದೇಶ್ವರ ಮತಯಾಚಿಸಿದರು.