10ನೇ ಕ್ಲಾಸಲ್ಲಿ ಜಸ್ಟ್‌ ಪಾಸಾದರೂ ಬ್ಯಾನರ್‌ ಕಟ್ಟಿ ಸಂಭ್ರಮಾಚರಣೆ!

KannadaprabhaNewsNetwork |  
Published : May 12, 2024, 01:24 AM ISTUpdated : May 12, 2024, 12:36 PM IST
ಪಚ್ಚನಾಡಿಯಲ್ಲಿ ಅಳವಡಿಸಲಾಗಿರುವ ಬ್ಯಾನರ್‌. | Kannada Prabha

ಸಾರಾಂಶ

ಶೇ.99 ಅಂಕ ಗಳಿಸಿದರೂ ಕಡಿಮೆಯಾಯಿತೆಂದು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವ ಈ ಕಾಲಘಟ್ಟದಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್‌ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

 ಮಂಗಳೂರು :  ಶೇ.99 ಅಂಕ ಗಳಿಸಿದರೂ ಕಡಿಮೆಯಾಯಿತೆಂದು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವ ಈ ಕಾಲಘಟ್ಟದಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್‌ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ನಗರದ ಪಚ್ಚನಾಡಿಯ ಹ್ಯಾಸ್ಲಿನ್‌ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೊ ಎಂಬ ಗೊಂದಲದಲ್ಲಿ ಆತನ ಸ್ನೇಹಿತರಿದ್ದರು. ಕೊನೆಗೆ ರಿಸಲ್ಟ್‌ ಬರುವಾಗ ಹ್ಯಾಸ್ಲಿನ್‌ ಪಾಸಾಗಿಬಿಟ್ಟಿದ್ದ. ಇದೇ ಖುಷಿಯಲ್ಲಿ ಅವನ ಸ್ನೇಹಿತರು ಪಚ್ಚನಾಡಿಯ ಮಂಗಳಾನಗರದ ರಸ್ತೆ ಬದಿಯಲ್ಲಿ ದೊಡ್ಡ ಬ್ಯಾನರನ್ನೇ ಅಳವಡಿಸಿ ಜಸ್ಟ್‌ ಪಾಸಾದ ಸ್ನೇಹಿತನಿಗೆ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬ್ಯಾನರ್‌ ಜಾಲತಾಣದಲ್ಲಿ ವೈರಲ್‌ ಆಗಿದೆ.ಮಾರ್ಕ್ಸ್‌ ಕಡಿಮೆಯಾಯಿತೆಂದು ಆತ್ಮಹತ್ಯೆ ಮಾಡುವ ಮಕ್ಕಳು ಇರುವಾಗ ಜಸ್ಟ್ ಪಾಸಾದರೂ ಸಂಭ್ರಮಿಸಿದ ರೀತಿ ಆತ್ಮಹತ್ಯೆ ಮಾಡಿಕೊಳ್ಳುವ ಮಕ್ಕಳಿಗೆ ಪಾಠ ಎಂದು ನೆಟ್ಟಿಗರು ಧನಾತ್ಮಕವಾಗಿ ಕಮೆಂಟಿಸಿದ್ದಾರೆ.

ಬ್ಯಾನರ್‌ ಕೂಡ ಡಿಫರೆಂಟ್‌!:

ಬ್ಯಾನರ್ ಅಳವಡಿಸಿದ ಸ್ನೇಹಿತರು ವಿಭಿನ್ನವಾಗಿಯೇ ಒಕ್ಕಣೆ ಬರೆಸಿದ್ದಾರೆ. ‘ಅಪ್ಪ ಅಮ್ಮನ ಆಶೀರ್ವಾದದಿಂದ, ಊರವರ ಬೈಗುಳದಿಂದ, ಊರವರ ಪ್ರೋತ್ಸಾಹದಿಂದ, ಟ್ಯೂಷನ್‌ ಮಹಾತ್ಮೆಯಿಂದ, ಶಾಲೆಯ ಕಿರಿಕಿರಿಯಿಂದ, ಶಿಕ್ಷಕರ ಬೋಧನೆಯಿಂದ, ಸೈಕಲ್‌- ಕ್ರಾಕ್ಸ್‌- ಪಿಯುಸಿ ಆಮಿಷದಿಂದ ಎಲ್ಲರ ಕುತೂಹಲ, ಬ್ರೂಸ್ಲಿ (ಹ್ಯಾಸ್ಲಿನ್‌) ಪಾಸೋ ಫೇಲೋ, ಇಂದು ಆ ಚರ್ಚೆಗೆ ತೆರೆ ಬಿದ್ದಿದೆ. ತೋಚಿದ್ದು ಗೀಚಿ ಫೇಲ್ ಆಗುವವನು ಹರಕೆಯ ಬಲದಿಂದ, ಪ್ರಯತ್ನದ ಫಲದಿಂದ ಹೇಗೋ ಒಟ್ಟಾರೆ ನಮ್ಮ ಬ್ರೂಸ್ಲಿ ಜಸ್ಟ್‌ ಪಾಸಾಗಿರೋದೆ ನಮಗೆಲ್ಲ ಸಂಭ್ರಮ ಸಂಭ್ರಮ..

 ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 300 ಅಂಕ ಪಡೆದು ಉತ್ತೀರ್ಣನಾದ ಹ್ಯಾಸ್ಲಿನ್‌ ನಿಮಗೆ ಅಭಿನಂದನೆಗಳು’ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ. ಬ್ಯಾನರ್‌ ಬರೆದವರು- ಹ್ಯಾಸ್ಲಿನ್‌ (ಬ್ರೂಸ್ಲಿ) ಹಿತೈಷಿಗಳು, ಯುವ ಫ್ರೆಂಡ್ಸ್‌ ಮಂಗಳಾನಗರ ಎಂದೂ ಉಲ್ಲೇಖಿಸಲಾಗಿದೆ. ಬ್ಯಾನರ್‌ನಲ್ಲಿ ಜಸ್ಟ್ ಪಾಸಾದ ಹ್ಯಾಸ್ಲಿನ್‌ನ ದೊಡ್ಡ ಫೋಟೊವನ್ನೂ ಅಳವಡಿಸಿರುವುದು ವಿಶೇಷ.

ಎಸ್ಸೆಸ್ಸೆಲ್ಸಿ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ:

ವಿದ್ಯಾರ್ಥಿಯೋರ್ವಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೆಲಾದ ಕಾರಣ ಮನನೊಂದು ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೊಸದುರ್ಗ ಪಟ್ಟಣದಲ್ಲಿ ಶನಿವಾರ ನಡೆದಿದೆ. ಹೊಸದುರ್ಗ ಪಟ್ಟಣದ ಧನುಶ್ರೀ (16) ನೇಣೀಗೆ ಶರಣಾದ ವಿದ್ಯಾರ್ಥಿನಿ. ಈಕೆ 4 ವಿಷಯಗಳಲ್ಲಿ ಫೇಲಾಗಿದ್ದಳು. ಇದರಿಂದ ಮನನೊಂದಿದ್ದ ಧನುಶ್ರೀ ಕಳೆದ 3 ದಿನದಿಂದ ಖಿನ್ನತೆಗೆ ಒಳಗಾಗಿದ್ದಳು. ಪೋಷಕರು ಇನ್ನೊಮ್ಮೆ ಪರೀಕ್ಷೆ ಬರೆಯುವಂತೆ ಧೈರ್ಯ ಹೇಳಿದ್ದರು. ಆದರೆ ಶನಿವಾರ ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಅಡುಗೆ ಮನೆಯಲ್ಲಿನ ತೊಲೆಗೆ ನೇಣು ಹಾಕಿಕೊಂಡಿದ್ದಾಳೆ ಎಂದು ಆಕೆ ತಂದೆ ನಾಗರಾಜ ಪೋಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈಸಂಬಂಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಶಾಲೆಯಲ್ಲೆ ಸಾಹಿತ್ಯ, ಸಂಸ್ಕೃತಿ ಪರಿಚಯಿಸಿ
ಭತ್ತ ಸಸಿ ನಾಟಿಗೆ ಕಾಲುವೆಗಳಿಗೆ ಭದ್ರಾ ನೀರು ಹರಿಸಿ: ಬಿಜೆಪಿ ರೈತ ಮೋರ್ಚಾ