ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸುವುದು ನಮ್ಮ ಪ್ರಥಮ ಆಧ್ಯತೆಯಾಗಿದೆ ಎಂದು ಚಿಕ್ಕೋಡಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಯಕ್ಸಂಬಾ ಪಟ್ಟಣದಲ್ಲಿ ಭಾನುವಾರ ಜನಸಂಪರ್ಕ ಸಭೆ (ಜನತಾ ದರ್ಶನ) ಆಯೋಜಿಸಿ ಕ್ಷೇತ್ರದ ವಿವಿಧ ಕಡೆಯಿಂದ ಬಂದಿದ್ದ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದನಾಗಿ ಕೆಲಸ ಮಾಡಲು ಕ್ಷೇತ್ರದ ಜನರ ಸಹಕಾರವೇ ಕಾರಣ. ಆದ್ದರಿಂದ ಅವರ ಸೇವೆ ಮಾಡಲು ತಾನು ಸದಾ ಸಿದ್ದವಿರುವುದಾಗಿ ಹೇಳಿದರು.ಈ ಸಲದ ಚುನಾವಣೆಯಲ್ಲಿಯೂ ಸಹ ಮತದಾರರು ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಮತದಾನದ ಬಳಿಕ ಜನರು ನನ್ನೊಂದಿಗೆ ಮತದಾನದ ಕುರಿತು ಚರ್ಚಿಸಿ ಗೆಲ್ಲುವ ನಿರೀಕ್ಷೆ ಹೇಳಿಕೊಂಡಿದ್ದಾರೆ. ಈ ಸಲ ಮತ್ತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಲದ ಚುನಾವಣೆಯಲ್ಲಿಯೂ ಸಹ ಮತದಾರರು ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಮತದಾನದ ಬಳಿಕ ಜನರು ನನ್ನೊಂದಿಗೆ ಮತದಾನದ ಕುರಿತು ಚರ್ಚಿಸಿ ಗೆಲ್ಲುವ ನಿರೀಕ್ಷೆ ಹೇಳಿಕೊಂಡಿದ್ದಾರೆ. ಈ ಸಲ ಮತ್ತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸವಿದೆ.ಅಣ್ಣಾಸಾಹೇಬ್ ಜೊಲ್ಲೆ, ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ