ಕೊಪ್ಪಳ:
ಖಾಸಗಿ ಸ್ಲೀಪರ್ ಬಸ್ಗಳು ಓಡುತ್ತವೆ. ಆದರೆ, ಎನ್ಇಕೆಎಸ್ಆರ್ಟಿಸಿ ಬಸ್ ಓಡಿಸಲು ಅಧಿಕಾರಿಗಳಿಗೆ ಮನಸ್ಸಿಲ್ಲ. ಇದು ಖಾಸಗಿ ಬಸ್ಗಳ ಲಾಭಿಯೂ ಇರಬಹುದು. ಅಥವಾ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿರ್ಲಕ್ಷ್ಯವೂ ಕಾರಣವಿರಬಹುದು ಎಂಬ ಆರೋಪ ಕೇಳಿ ಬರುತ್ತಿವೆ.
ಸಚಿವರೂ ಹೇಳಿದರೂ ಬಂದಿಲ್ಲ:ಕೊಪ್ಪಳಕ್ಕೆ ಆರು ತಿಂಗಳ ಹಿಂದೆ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗಾರಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸುತ್ತಿದ್ದಂತೆ, ನಿಮಗೆ ಏನು ಬೇಕು, ಬಸ್ ತಾನೆ, ಓಡಿಸ್ತೀವಿ ಬಿಡಿ ಎಂದಿದ್ದರು. ವಾರದೊಳಗಾಗಿಯೇ ನಿಮ್ಮೂರಿನಿಂದ ಬೆಂಗಳೂರಿಗೆ ಸ್ಲೀಪರ್ ಬಸ್ ಪ್ರಾರಂಭವಾಗುತ್ತದೆ ಎಂದಿದ್ದರು. ಹೊಸ ಸ್ಲೀಪರ್ ಬಸ್ಗಳು ಬಂದಿದ್ದು, ನಿಮಗೆ ಎಷ್ಟು ಬೇಕು ಅಷ್ಟು ಕೊಡುತ್ತೇನೆ ಎಂದಿದ್ದರು. ಆದರೆ, ಅದ್ಯಾವ ಬಸ್ ಪ್ರಾರಂಭವಾಗಲೇ ಇಲ್ಲ. ಈಗ ಸಾರಿಗೆ ಸಚಿವ ರಾಮಲಿಂಗರಡ್ಡಿ ಅವರು ಮಾ. 1ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮರಳಿ ಸಾರಿಗೆ ಸಚಿವರು ಬಂದರೂ ಸಚಿವರು ಆದೇಶ ಮಾಡಿದ ಬಸ್ ಮಾತ್ರ ಈ ವರೆಗೂ ಬಂದಿಲ್ಲ.
ವಿಭಾಗೀಯ ಕಚೇರಿ ಕಲಬುರಗಿಯಲ್ಲಿದೆ. ಅಲ್ಲಿಗೆ ನಿತ್ಯವೂ ನಾನಾ ಕೆಲಸಕ್ಕಾಗಿ ಜನರು ಸೇರಿದಂತೆ ಅನೇಕರು ಓಡಾಡುತ್ತಾರೆ. ಆದರೆ, ಕೊಪ್ಪಳದಿಂದ ಕಲಬುರಗಿಗೂ ಸ್ಲೀಪರ್ ಬಸ್ ಓಡಿಸುತ್ತಿಲ್ಲ. ಕಲಬುರಗಿಗೆ ಹೋಗಬೇಕು ಎಂದರೆ ಗಂಗಾವತಿಗೆ ಹೋಗಿಯೇ ಹೋಗಬೇಕು.ಶಾಸಕರೇ ಇತ್ತ ನೋಡಿ: