-ಕೋಟ್ಪಾ ಕಾಯ್ದೆ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಸೂಚನೆ
ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಶಾಲೆಯ ಆಸು ಪಾಸಿನಲ್ಲಿ ತಂಬಾಕು ಬಳಕೆ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಶಾಲೆಗಳಲ್ಲಿ ತಂಬಾಕು ನಿಯಂತ್ರಣ ಸಭೆ ನಡೆಸುವಂತೆ ತಹಸೀಲ್ದಾರ್ ನಾಗವೇಣಿ ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಕೋಟ್ಪಾ-2003ರ ಕಾಯ್ದೆಯ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಶಾಲೆಗಳ ಸುತ್ತ-ಮುತ್ತ 100 ಗಜದ ವ್ಯಾಪ್ತಿಯಲ್ಲಿ ತಂಬಾಕು ದಾಳಿ ಕೈಗೊಂಡು, ತಂಬಾಕು ಮಾರಾಟ ಮಾಡದಂತೆ ತಡೆಯಬೇಕು. ಯಾವ ಶಾಲೆಗಳ ಹತ್ತಿರ ತಂಬಾಕು ಮಾರಾಟವಾಗುತ್ತಿದೆಯೋ ಅಂತಹ ಶಾಲೆಗಳ ಪಟ್ಟಿ ಮಾಡಿ, ತಂಬಾಕು ದಾಳಿ ಕೈಗೊಳ್ಳಬೇಕು. ಎಲ್ಲಾ ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಮಾಡುವಲ್ಲಿ ಮುಖ್ಯೋಪಾಧ್ಯಾಯರು ಸೂಕ್ತ ಕ್ರಮವಹಿಸಬೇಕೆಂದರು.
ಚಿತ್ರದುರ್ಗ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗಳಾಗಿ ಮಾಡಬೇಕೆಂದು ಇಲಾಖೆಯ ಎಲ್ಲಾ ಕಚೇರಿ ಮುಖ್ಯಸ್ಥರಿಗೆ ಸೂಚಿಸಿದ ಅವರು, ತಂಬಾಕು ಸೇವನೆ ಮಾಡುವವರ ಮೇಲೆ ಮೇಲಧಿಕಾರಿಗಳು ನಿಗಾ ಇಡಬೇಕು. ಬೀಡಿ ಸಿಗರೇಟು ಸೇದುವ ನೆಪದಲ್ಲಿ ಪದೇ ಪದೆ ಕಚೇರಿಯಿಂದ ಎದ್ದು ಹೊರ ಹೋಗುವವರ ಮೇಲೆ ಹಿಡಿತ ಸಾಧಿಸುವಂತೆ ಸೂಚಿಸಿದರು.
ತಂಬಾಕು ನಿಯಂತ್ರಣಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್ ಮಾತನಾಡಿ, ತಾಲೂಕು ಮಟ್ಟದ ತಂಬಾಕು ತನಿಖಾ ತಂಡವು ಕನಿಷ್ಟ ವಾರಕ್ಕೊಮ್ಮೆಯಾದರೂ ತಂಬಾಕು ದಾಳಿಯನ್ನು ನಡೆಸಲು ತಹಶೀಲ್ದಾರ್ ಅವರಲ್ಲಿ ಕೋರಿದರು. ತಾಲೂಕು ಪಂಚಾಯಿತಿ ವ್ಯವಸ್ಥಾಪಕರು, ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರ್ಬಿಎಸ್ಕೆ ವೈದ್ಯಾಧಿಕಾರಿಗಳು ಮತ್ತು ನರ್ಸಿಂಗ್ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಸಿಓ, ನೋಡೆಲ್ ಅಧಿಕಾರಿ ಡಿಡಿಆರ್ಸಿ, ಬಸವೇಶ್ವರ ವಿದ್ಯಾ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪೋಟೋ ಕ್ಯಾಪ್ಸನ್
-------ಫೋಟೋ:8 ಸಿಟಿಡಿ1