ಪ್ರತಿ ಗ್ರಾಮಗಳನ್ನು ಅಭಿವೃದ್ಧಿಪಡಿಸುವೆ: ಶಾಸಕ ಕೆ.ನೇಮರಾಜ್‌ ನಾಯ್ಕ

KannadaprabhaNewsNetwork |  
Published : Jan 14, 2026, 03:45 AM IST
ಫೋಟೋವಿವರ- (13ಎಂಎಂಎಚ್‌2) ಮರಿಯಮ್ಮನಹಳ್ಳಿ ಸಮೀಪದ ಹಂಪಿನಕಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿ ಹಾಗೂ ಗ್ರಂಥಾಲಯ ಕೊಠಡಿ ಭೂಮಿ ಪೂಜೆಯನ್ನು ಶಾಸಕ ಕೆ. ನೇಮರಾಜ್‌ ನಾಯ್ಕ ನೆರವೇರಿಸಿದರು | Kannada Prabha

ಸಾರಾಂಶ

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ತದ ಪ್ರತಿ ಗ್ರಾಮಗಳನ್ನು ಅಭಿವೃದ್ಧಿಗೊಳಿಸಲಾಗುವುದು

ಮರಿಯಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ತದ ಪ್ರತಿ ಗ್ರಾಮಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ ಕೆ. ನೇಮರಾಜ್‌ ನಾಯ್ಕ ಹೇಳಿದರು.ಸಮೀಪದ ಹಂಪಿನಕಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿ ಹಾಗೂ ಗ್ರಂಥಾಲಯ ಕೊಠಡಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಗರಿಬೊಮ್ಮನಹಳ್ಳಿ ಕ್ಷೇತ್ರದ ಪ್ರತಿಯೊಂದು ಗ್ರಾಮದ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಶೈಕ್ಷಣಿಕವಾಗಿ ನಮ್ಮ ಕ್ಷೇತ್ರ ಪ್ರಗತಿ ಹೊಂದಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಶಾಲಾ ಆವರಣದಲ್ಲಿ ಮೂಲಭೂತ ಸೌಲಭ್ಯಗಳು ದೊರೆಯಂತಾಗಬೇಕು ಎಂದು ಅವರು ಹೇಳಿದರು.

ಈಗಾಗಲೇ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಲಾಗುತ್ತಿದೆ. ಇನ್ನು ಗ್ರಾಮಗಳಲ್ಲಿ ಉಳಿದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಮುಖಂಡರಾದ ಅಂಬ್ರೇಶ್‌ ಗೌಡ, ಕಡ್ಡಿ ಹನುಮಂತಪ್ಪ, ಮಂಜುನಾಥ, ಲಕ್ಷ್ಮಣ್, ಶ್ರೀರಾಮ, ಫಕ್ಕೀರಪ್ಪ, ತಂಗರಾಜ, ಎಚ್‌.ಪಾಂಡುರಂಗಶೆಟ್ಟಿ, ವೈ.ಮಲ್ಲಿಕಾರ್ಜುನ, ದುರುಗಪ್ಪ, ನಾಗರಾಜ, ಮಂಜುನಾಥ ಇದ್ದರು.

ಮರಿಯಮ್ಮನಹಳ್ಳಿ ಸಮೀಪದ ಹಂಪಿನಕಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿ ಹಾಗೂ ಗ್ರಂಥಾಲಯ ಕೊಠಡಿ ಭೂಮಿ ಪೂಜೆಯನ್ನು ಶಾಸಕ ಕೆ. ನೇಮರಾಜ್‌ ನಾಯ್ಕ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ