ವಿಜಯಪುರ: ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಸಾಹಿತಿಗಳೇ ಆಗಬೇಕೆಂದೇನೂ ಇಲ್ಲ. ಕನ್ನಡ ಓದು ಬರಹ ಬರುವವರು ಯಾರು ಬೇಕಾದರೂ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಬಹುದು ಎಂದು ತಾಲೂಕು ಕಸಾಪ ಘಟಕದ ಅಧ್ಯಕ್ಷ ನಂಜೇಗೌಡ ಹೇಳಿದರು.
ರಂಗಕಲಾವಿದ ರಬ್ಬನಹಳ್ಳಿ ಕೆಂಪಣ್ಣ ಮಾತನಾಡಿ, ಕನ್ನಡ ಭಾಷೆಯ ಹಿರಿಮೆಯನ್ನು ಜಗತ್ತಿಗೆ ಸಾರಬೇಕು. ಇಲ್ಲಿನ ಕವಿಗಳು, ಸಾಹಿತಿಗಳು, ಲೇಖಕರು, ದಾಸರು, ಶರಣರು ಹೀಗೆ ಎಲ್ಲಾ ವಿಭಾಗಗಳಲ್ಲಿನ ಮಹನೀಯರನ್ನು ಪ್ರಪಂಚಕ್ಕೆ ಪರಿಚಯಿಸಬೇಕು ಎನ್ನುವ ನಿಟ್ಟಿನಲ್ಲಿ ಹುಟ್ಟುಹಾಕಿದ ಸಾಹಿತ್ಯ ಪರಿಷತ್ತು, ಅನೇಕ ಸವಾಲುಗಳ ನಡುವೆ, ಮುನ್ನಡೆಯುತ್ತಿದೆ. ಇಂತಹ ಉತ್ತಮ ಸಂಸ್ಥೆಯನ್ನು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ, ಹಾಗೂ ಸರ್. ಮಿರ್ಜಾ ಇಸ್ಮಾಯಿಲ್ ಅವರನ್ನು ನಾವೆಲ್ಲರೂ ನೆನೆಯಬೇಕಿದೆ. ಮಮ್ಮಿ, ಡ್ಯಾಡಿ ಸಂಸ್ಕೃತಿಯಿಂದ ಅಪ್ಪ, ಅಮ್ಮನ ಸಂಸ್ಕೃತಿಗೆ ಮರಳಬೇಕಿದೆ ಎಂದರು.
ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, ಯುವಜನರು ಕನ್ನಡಾಭಿಮಾನ ಬೆಳೆಸಿಕೊಂಡು, ಮುಂದಿನ ಪೀಳಿಗೆಗೆ ಕನ್ನಡ ಭಾಷೆ, ಸಾಹಿತ್ಯ ಮಹತ್ವವನ್ನು ತಿಳಿಸಬೇಕು ಎಂದರು.ಜಾನಪದ ಕಲಾವಿದ ಹೊಸಹಳ್ಳಿ ವಾಸುದೇವ್ ಅವರು ಜಾನಪದ ಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನೂ ರಂಜಿಸಿದರು.