ಬೆಂಗಳೂರಿನಲ್ಲಿರುವ ಎಲ್ಲರೂ ಕೆಂಪೇಗೌಡರನ್ನು ಸ್ಮರಿಸಿ: ಶ್ರೀನಿವಾಸ್

KannadaprabhaNewsNetwork |  
Published : Jun 29, 2025, 01:32 AM IST
ಕೆ ಕೆ ಪಿ ಸುದ್ದಿ 01:  ನಗರದ ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಆಚರಣೆ | Kannada Prabha

ಸಾರಾಂಶ

ಇಂದು ಕನ್ನಡ ನಾಡಿನ ಪಾಲಿಗೆ ಒಂದು ಶುಭದಿನ. ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಕೆಂಪೇಗೌಡರನ್ನು ಸ್ಮರಿಸಬೇಕಾದ ದಿನವಾಗಿದೆ.

ಕನಕಪುರ:

ಕೃಷ್ಣದೇವರಾಯನ ಕಾಲದಲ್ಲಿ ಜನಪರ ಆಡಳಿತ ನೀಡಿದ ಕೆಂಪೇಗೌಡರು ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿ ಹಂಪಿಯ ವೈಭವವನ್ನು ಕಂಡು ಬೆರಗಾಗಿ ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಇಂದು ರಾಜಧಾನಿಯಾಗಿ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ಶಿಕ್ಷಕ ಕೆ.ಟಿ. ಶ್ರೀನಿವಾಸ್ ತಿಳಿಸಿದರು

ತಾಲೂಕು ಆಡಳಿತದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕನ್ನಡ ನಾಡಿನ ಪಾಲಿಗೆ ಒಂದು ಶುಭದಿನ. ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಕೆಂಪೇಗೌಡರನ್ನು ಸ್ಮರಿಸಬೇಕಾದ ದಿನವಾಗಿದೆ. ಬೆಂಗಳೂರಿನಂತ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 516ನೇ ಜನ್ಮದಿನವನ್ನು ರಾಜ್ಯ ಸರ್ಕಾರವೇ ಬಹಳ ವಿಜೃಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ತಹಸೀಲ್ದಾರ್ ಮಂಜುನಾಥ್ ಕೆಂಪೇಗೌಡರ ಜನಪರ ಆಡಳಿತ ಹಾಗೂ ದೂರದೃಷ್ಟಿಯ ಬಗ್ಗೆ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ದಿಲೀಪ್, ನಗರಸಭಾ ಅಧ್ಯಕ್ಷೆ ಹೇಮಾರಾಜು, ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಿ, ಸದಸ್ಯೆ ಸರಳಾ ಶ್ರೀನಿವಾಸ್, ಎಡಿಎಲ್‌ಆರ್ ನಂದೀಶ್, ಕಾರ್ಮಿಕ ನಿರೀಕ್ಷಕ ಜಯಪ್ರಕಾಶ್, ಶಿಕ್ಷಣ ಇಲಾಖೆ ರಾಜು, ಬಿಇಒ ಮತ್ತೀಗೌಡ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಧಾಕೃಷ್ಣ ಮೊದಲಾದವರು ಭಾಗಿಯಾಗಿದ್ದರು.

ಕೆ ಕೆ ಪಿ ಸುದ್ದಿ 01: ಕನಕಪುರದ ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉದ್ಘಾಟಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ