ಯಲಬುರ್ಗಾ: ಜಾತಿ, ಮತ, ಪಂಥಗಳಿಗೆ ಅವಕಾಶ ನೀಡದೆ ಸಂವಿಧಾನದಡಿಯಲ್ಲಿ ಸರ್ವರೂ ಸಮಾನರೆಂದು ಜೀವನ ನಡೆಸಬೇಕು ನಿವೃತ್ತ ನ್ಯಾಯಾಧೀಶ ಹಾಗೂ ಗದಗ ಜಿಲ್ಲಾಧಿಕಾರಿಗಳ ಗೌರವ ಸಲಹೆಗಾರ ಎಸ್.ಜಿ. ಪಲ್ಲೇದ ಹೇಳಿದರು.
ಮಾನವೀಯ ಮೌಲ್ಯಗಳ ಪುನರುತ್ಥಾನ ಆಗುವುದರ ಜತೆಗೆ ರಾಷ್ಟ್ರೀಯ ಭಾವೈಕ್ಯತೆ ಹಾಗೂ ಜಾತ್ಯಾತೀತ ಗುಣ ಬೆಳೆಸಲು ಪೌರತ್ವ ತರಬೇತಿಯಿಂದ ಸಾಧ್ಯ. ಸಮಾನತೆಯ ಸಹಬಾಳ್ವೆ ನಡೆಸಿ, ಸರ್ವರಲ್ಲಿ ಒಂದೊಂದು ಪ್ರತಿಭೆ ಇರುತ್ತದೆ ಹಾಗಾಗಿ ಸಕಲರನ್ನು ಗೌರವಿಸುವುದು ಅವಶ್ಯ ಎಂದರು.
ಕುಕನೂರಿನ ಅನ್ನದಾನೀಶ್ವರ ಶಾಖಾಮಠದ ಡಾ. ಮಹಾದೇವ ಸ್ವಾಮೀಜಿ ಮಾತನಾಡಿ, ಶಿಕ್ಷಣದಿಂದ ಏನೆಲ್ಲ ಸಾಧಿಸಬಹುದು. ಬದುಕಿನಲ್ಲಿ ಸಮಯಕ್ಕೆ ಮಹತ್ವ ನೀಡಿದರೆ ಜೀವನ ಸಮೃದ್ಧಿಯಾಗುತ್ತದೆ. ಮಾತಿಗಿಂತ ಕಾಯಕಕ್ಕೆ ಹೆಚ್ಚು ಮಹತ್ವ ನೀಡುವ ನಿಂಗೋಜಿ ಶಿಕ್ಷಣ ಸಂಸ್ಥೆ ಸಂಸ್ಕಾರ, ಮೌಲ್ಯ ಬಿತ್ತರಿಸುವ ಮೂಲಕ ಮಾನವೀಯ ನೆಲೆಯಲ್ಲಿ ಶಿಕ್ಷಣ ಕೊಡುವ ಮೂಲಕ ನಮ್ಮ ಭಾಗದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದೆ ಎಂದರು.ನಿವೃತ್ತ ಪ್ರಾಚಾರ್ಯ ಜಿ.ಎಂ. ನಿಂಗೋಜಿ ಅಧ್ಯಕ್ಷತೆ ವಹಿಸಿದ್ದರು.