ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಶೋಣ : ಅನುರಾಧ ಆನಂದ್

KannadaprabhaNewsNetwork |  
Published : Mar 27, 2025, 01:06 AM IST
26ಜಿಯುಡಿ1 | Kannada Prabha

ಸಾರಾಂಶ

ಗಡಿಭಾಗವಾದ ಗುಡಿಬಂಡೆ ತಾಲೂಕಿನ ಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ, ಕನ್ನಡ ಭಾಷೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯೋಣ ಎಂದು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ನೂತನ ತಾಲೂಕು ಅಧ್ಯಕ್ಷೆ ಅನುರಾಧ ಆನಂದ್ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಗಡಿಭಾಗವಾದ ಗುಡಿಬಂಡೆ ತಾಲೂಕಿನ ಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ, ಕನ್ನಡ ಭಾಷೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯೋಣ ಎಂದು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ನೂತನ ತಾಲೂಕು ಅಧ್ಯಕ್ಷೆ ಅನುರಾಧ ಆನಂದ್ ಮನವಿ ಮಾಡಿದರು.

ನೂತನ ಅಧ್ಯಕ್ಷೆ ಅನುರಾಧ ಆನಂದ್ ರವರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಗಡಿಭಾಗವಾದ ಗುಡಿಬಂಡೆಯಲ್ಲಿ ಈಗಾಗಲೇ ಕನ್ನಡ ಉನ್ನತ ಸ್ಥಾನದಲ್ಲಿದೆ. ಈ ಭಾಗದಲ್ಲಿ ಆಡು ಭಾಷೆ, ವ್ಯಾವಹಾರಿಕ ಭಾಷೆ ತೆಲುಗು ಆದರೂ ಸಹ, ಕನ್ನಡ ಭಾಷೆಗೆ ಯಾವುದೇ ಧಕ್ಕೆಯಿಲ್ಲ. ಕನ್ನಡಪರ ಸಂಘಟನೆಗಳು ಈ ಭಾಗದಲ್ಲಿ ಕನ್ನಡ ಭಾಷೆಯ ಹಿರಿಮೆ ಸಾರುವಂತಹ ಕಾರ್ಯಕ್ರಮಗಳನ್ನು ಸದಾ ಹಮ್ಮಿಕೊಳ್ಳುತ್ತಿರುತ್ತಾರೆ. ಈ ಕೆಲಸ ತಾತ್ಕಾಲಿಕವಾಗಿ ಅಥವಾ ಸಂದರ್ಭಗಳಿಗೆ ತಕ್ಕಂತಿರಬಾರದು, ಬದಲಿಗೆ ಇದು ನಿರಂತರವಾಗಿ ನಡೆಯುತ್ತಿರಬೇಕು. ನನ್ನ ಮೇಲಿನ ನಂಬಿಕೆಯಿಂದ ಇದೀಗ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಅಧ್ಯಕ್ಷೆಯಾಗಿ ಹೊಸ ಜವಾಬ್ದಾರಿಯನ್ನು ನೀಡಿದ್ದು, ಈ ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಂಬರೀಶ್ ಮಾತನಾಡಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನುರಾಧಾರವರಿಗೆ ಅಭಿನಂದಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಬಿ.ಮಂಜುನಾಥ್, ಪಪಂ ಅಧ್ಯಕ್ಷ ವಿಕಾಸ್, ಸದಸ್ಯೆ ಮಂಜುಳಾ, ಬಿ.ಆರ್.ಸಿ ಸಂಯೋಜಕಿ ಗಂಗರತ್ನಮ್ಮ, ಕರ್ನಾಟಕ ರಕ್ಷಣಾ ವೇದಿಕೆಯ ಆನಂದ್, ಶ್ರೀನಿವಾಸ್ ಯಾದವ್, ಜಯ ಕರ್ನಾಟಕ ಸಂಘಟನೆಯ ಅಂಬಿಕಾ, ಕಸಾಪ ಸಂಘಟನೆಯ ವಾಹಿನಿ ಸುರೇಶ್, ವೀಣಾ, ಅನಿತಾ, ಭಾರತಿ, ಶ್ರೀನಿವಾಸ್ ಗಾಂಧಿ, ಶಿಕ್ಷಕರಾದ ಮಹಾಲಕ್ಷ್ಮೀ, ಅರುಣ, ಕನ್ನಡಾಭಿಮಾನಿ ಪುನೀತ್ ಕನ್ನಡಿಗ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ