ಹೋರಾಟಕ್ಕೆ ಎಲ್ಲರು ಕೈ ಜೋಡಿಸಿ:ಮುನವಳ್ಳಿ

KannadaprabhaNewsNetwork |  
Published : Jul 29, 2026, 02:30 AM IST
28ುಲು10 | Kannada Prabha

ಸಾರಾಂಶ

ನಾವೆಲ್ಲ ರೈತರು ಒಂದಾಗಿ ಹೋರಾಟ ಮಾಡಬೇಕು, ರಾಜ್ಯದಲ್ಲಿ ಈ ಕಾಂಗ್ರೆಸ್ ಪಕ್ಷದ ಆಡಳಿತ ಇರುವುದರಿಂದ ಈ ರೀತಿ ರೈತರಿಗೆ ತೊಂದರೆ ಆಗುತ್ತಿದೆ

ಗಂಗಾವತಿ:ತುಂಗಭದ್ರಾ ಜಲಾಶಯದಿಂದ ವಿಜಯನಗರ ಎಡದಂಡೆ ಕಾಲುವೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಜು.31ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ತಾಲೂಕಿನ ಪಂಪಾಸರೋವರದ ಆವರಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಜತೆ ಜಲಾಶಯಕ್ಕೆ ತೆರಳಿ ಇನ್ನು ಎರಡು ಮೂರು ದಿನಗಳಲ್ಲಿ ವಿಜಯನಗರ ಕಾಲುವೆಗೆ ನೀರು ಬಿಡುವಂತೆ ಒತ್ತಾಯಿಸಲಾಗಿದೆ. ಆದರೂ ಅಧಿಕಾರಿಗಳ ಗಮನ ಸೆಳೆಯಲು ಗಂಗಾವತಿ ಮತ್ತು ಕೊಪ್ಪಳ ಭಾಗದವರು ಜತೆಯಾಗಿ ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದರು.

ಜು.31ರಂದು ಗಂಗಾವತಿ ಮತ್ತು ಕೊಪ್ಪಳ ಭಾಗದ ರೈತರು ಲಿಂಗಾಪುರ ಬಳಿ ಸೇರಿ ಅಲ್ಲಿಂದ ಜಲಾಶಯಕ್ಕೆ ತೆರಳಿ ನೀರಾವರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದರು.

ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿ, ನಾವೆಲ್ಲ ರೈತರು ಒಂದಾಗಿ ಹೋರಾಟ ಮಾಡಬೇಕು, ರಾಜ್ಯದಲ್ಲಿ ಈ ಕಾಂಗ್ರೆಸ್ ಪಕ್ಷದ ಆಡಳಿತ ಇರುವುದರಿಂದ ಈ ರೀತಿ ರೈತರಿಗೆ ತೊಂದರೆ ಆಗುತ್ತಿದೆ ಎಂದು ದೂರಿದರು.

ಮಾಜಿ ಸಂಸದ ಶಿವರಾಮಗೌಡ, ಸಿದ್ದರಾಮಯ್ಯ ಸ್ವಾಮಿ, ಗ್ರಾಮೀಣ ಅಧ್ಯಕ್ಷ ಡಿ.ಕೆ.ಆಗೊಲಿ, ಮನೋಹರ ಗೌಡ, ರೈತ ಮುಖಂಡ ಗಿರಿಗೌಡ, ತಿಪ್ಪರುದ್ರ ಸ್ವಾಮಿ, ಚನ್ನಪ್ಪ ಮಳಗಿ, ನಾರಾಯಣಪ್ಪ, ಆನೆಗುಂದಿ ಹಾಗೂ ಸುತ್ತಮುತ್ತಲಿನ ಹಳ್ಳಿಯ ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೈನಿಕರನ್ನು ಗೌರವಿಸುವ ಕಾರ್ಯವಾಗಲಿ
ಶೆಟ್ಟಿಗೇರಿ: ಮಾಜಿ ಸೈನಿಕರ ಸಂಘದಿಂದ ಕಾರ್ಗಿಲ್ ವಿಜಯ ದಿನ ಆಚರಣೆ