ಕನ್ನಡಪ್ರಭ ವಾರ್ತೆ, ತುಮಕೂರು
ನಗರದ ಸಿದ್ದಿವಿನಾಯಕ ಭವನದಲ್ಲಿ ಗೋಸಲ ವೆಂಚರ್ಸ್, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮಸ್ಕತ್ನಲ್ಲಿ ನಡೆಯಲಿರುವ 3ನೇ ವಿಶ್ವ ಕನ್ನಡ ಹಬ್ಬದ ಪ್ರವಾಸ ಬಿತ್ತಿ ಪತ್ರ ಬಿಡುಗಡೆ ಹಾಗೂ ಗೋಸಲ ಪ್ರವಾಸ ನಿಧಿ ಯೋಜನೆ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಎಲ್ಲ ಕಾರ್ಪೋರೇಟ್ ಕಂಪನಿಗಳು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಆಂಗ್ಲಭಾಷೆ ವ್ಯಾಮೋಹ ಹೆಚ್ಚಾಗಿದೆ. ಇದನ್ನು ಗಮನಿಸುತ್ತಿದ್ದರೆ ಎಲ್ಲೆಡೆ ಇಂಗ್ಲಿಷ್ ವ್ಯಾಮೋಹ ಪ್ರವರ್ಧಮಾನಕ್ಕೆ ಬರುತ್ತಿದೆ. ಹಾಗಾಗಿ ನಾವೆಲ್ಲರೂ ಜತೆಗೂಡಿ ಕನ್ನಡ ಭಾಷೆಯನ್ನು ಎಲ್ಲ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ತರುವ ಕೆಲಸವನ್ನು ಮಾಡಬೇಕಿದೆ ಎಂದರು.ವಿದೇಶಗಳಲ್ಲಿ ಕನ್ನಡ ನಾಡು-ನುಡಿ ಪಸರಿಸುವ ಕೆಲಸವನ್ನು ಗೋಸಲ ವೆಂಚರ್ಸ್ ಸಂಸ್ಥೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ವಿದೇಶಗಳಲ್ಲಿ ಕನ್ನಡ ಭಾಷೆಯ ಕಂಪನ್ನು ಪಸರಿಸುತ್ತಿರುವ ಈ ಸಂಸ್ಥೆಯ ಶ್ರಮ ಅಪಾರವಾಗಿದೆ. ಒಮನ್ ದೇಶ ಮಸ್ಕತ್ನಲ್ಲಿ 3ನೇ ವಿಶ್ವ ಕನ್ನಡ ಹಬ್ಬವನ್ನು ಆಚರಣೆ ಮಾಡುತ್ತಿರುವುದು ಸಂತೋಷಕರ ಸಂಗತಿ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
3ನೇ ವಿಶ್ವ ಕನ್ನಡ ಹಬ್ಬದಲ್ಲಿ ಸಾಧಕರಿಗೆ ವಿಶ್ವ ಮಾನ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಹಾಗೂ ಅತಿ ಸಾಧನೆ ಮಾಡಿರುವ ಮಹಾನ್ ವ್ಯಕ್ತಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದರು.
ಗೋಸಲ ವೆಂಚರ್ಸ್ ಮಾಲೀಕ ವಿಕಾಸ್ ಮಾತನಾಡಿ, ಒಮನ್ ದೇಶ ಮಸ್ಕತ್ನಲ್ಲಿ ನಡೆಯುತ್ತಿರುವ 3ನೇ ವಿಶ್ವ ಕನ್ನಡ ಹಬ್ಬದ ಪ್ರವಾಸ ಪಾಲುದಾರರಾಗಿದ್ದೇವೆ. ಕನ್ನಡ ಸೇವೆ ಪ್ರಪಂಚದಾದ್ಯಂತ ಪಸರಿಸಲಿ ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈ ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೆ.ಎಸ್. ಚನ್ನಬಸಪ್ಪ, ವೀಣಾ, ಗೋಸಲ ವೆಂಚರ್ಸ್ನ ವಿಕಾಸ್, ವೆಂಕಟೇಶ್, ನಂದನ, ಶೃತಿ ವಿಕಾಸ್, ಮಂಗಳಗೌರಮ್ಮ ಮತ್ತಿತರರು ಉಪಸ್ಥಿತರಿದ್ದರು.