ಕನ್ನಡಪ್ರಭ ವಾರ್ತೆ ಧಾರವಾಡ
ಯುವಕರು ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕು, ಕಾರು ಚಲಾಯಿಸುವಾಗ ಸಿಟ್ ಬೆಲ್ಟ್ ಹಾಕಬೇಕು. ಕಾನೂನು ಇರುವುದು ಜನರ ಸುರಕ್ಷತೆಗಾಗಿ. ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿದರೆ ಎಲ್ಲರೂ ಸುರಕ್ಷಿತವಾಗಿ ಪ್ರಯಾಣ ಮಾಡಬಹುದು ಎಂದರು.
ಆನ್ಲೈನ್ ವಂಚನೆ ಬಗ್ಗೆ ವಿವರಿಸಿದ ಅವರು, ಅನಾವಶ್ಯಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಗೊತ್ತಿಲ್ಲದವರ ಜತೆಗೆ ವ್ಯವಹಾರ ಇಟ್ಟುಕೊಳ್ಳವುದು ವಂಚನೆಗೆ ದಾರಿಯಾಗುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಜಿನದತ್ತ ಹಡಗಲಿ, ಹಿಂದಿನ ಕೋಶಾಧ್ಯಕ್ಷ ಶಿವಾನಂದ ಭಾವಿಕಟ್ಟಿ ಸೇರಿದಂತೆ ಹಲವರಿದ್ದರು. ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಹೇಶ ಹೊರಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಮಹಾದೇವ ಉಳ್ಳಾಗಡ್ಡಿ, ಉಪನ್ಯಾಸಕರಾದ ಅಕ್ಷತಾ ಕುಬಿಹಾಳ, ಎನ್.ಎಂ. ನಿಂಬಣ್ಣವರ, ರೆಹಮಾನಸಾಬ ಗೋಳಲ್ಲಿ ಹಾಗೂ ಸ್ವಯಂ ಸೇವಕರು ಊರಿನ ಹಿರಿಯರು, ಮಹಿಳೆಯರು ಭಾಗವಹಿಸಿದ್ದರು.
ನಂತರ ಹರ್ಲಾಪುರದ ಶಂಭಯ್ಯ ಹಿರೇಮಠ, ಸಿ.ವೈ.ಸಿ.ಡಿ. ಕಲಾ ಸಂಘ, ಹರ್ಲಾಪೂರ ಹಾಗೂ ತಂಡದವರು ಜಾನಪದ ಸಂಭ್ರಮದಲ್ಲಿ ಅನೇಕ ಜಾಗೃತಿ ಗೀತೆ ಹಾಡಿದರು. ಬಳಿಕ ಹಾಸ್ಯ ಕಾರ್ಯಕ್ರಮ ನಡೆಯಿತು.