ಚುನಾವಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ಡಿಸಿ ಪ್ರಶಾಂತಕುಮಾರ

KannadaprabhaNewsNetwork |  
Published : Apr 09, 2024, 12:46 AM ISTUpdated : Apr 09, 2024, 11:57 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಮುನ್ನ ಜರುಗಿದ ಸಹಿಸಂಗ್ರಹ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಹಿ ಹಾಕಿದರು.  | Kannada Prabha

ಸಾರಾಂಶ

ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಮತದಾನ ಒಂದು ಮೂಲಭೂತ ಹಕ್ಕು.

ಬಳ್ಳಾರಿ: ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ಹೊಸದಾಗಿ ನೋಂದಾಯಿಸಿಕೊಳ್ಳಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಯುವ ಮತದಾರರು ಇದರ ಪ್ರಯೋಜನ ಪಡೆದಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಂಗವಾಗಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಿಂದ ಆಯೋಜಿಸಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮೇ 7ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಪಾಲ್ಗೊಂಡು ಹಕ್ಕು ಚಲಾಯಿಸಬೇಕು. ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಮತದಾನ ಒಂದು ಮೂಲಭೂತ ಹಕ್ಕು. ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರು ಭಾಗವಹಿಸಿ ಮತ ಚಲಾವಣೆ ಮಾಡಿದಾಗ ಮಾತ್ರ ಪ್ರಜಾ ಪ್ರಭುತ್ವದಲ್ಲಿನ ನಮ್ಮ ಹಕ್ಕುಗಳ ಪರವಾಗಿ ಪ್ರಶ್ನಿಸಲು ಅರ್ಹರಾಗಿರುತ್ತೇವೆ ಎಂದರು.

ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ರಾಹುಲ್ ಶರಣಪ್ಪ ಸಂಕನೂರು ಮಾತನಾಡಿ, ಚುನಾವಣೆಗಳು ದೇಶದಲ್ಲಿ ಹಬ್ಬದ ಸಂಭ್ರಮವಾಗಿದ್ದು, ಸುಭದ್ರ ಪ್ರಜಾಪ್ರಭುತ್ವ ನಿರ್ಮಿಸಲು ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಮನವಿ ಮಾಡಿದರು. ಎಸ್ಪಿ ರಂಜಿತ್ ಕುಮಾರು ಬಂಡಾರು ಮಾತನಾಡಿದರು. ಬಳಿಕ ಮತದಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಸಾರ್ವಜನಿಕರಲ್ಲಿ ಮತದಾನ ಅರಿವು ಮೂಡಿಸುವ ಸಲುವಾಗಿ ‘ನಾನು ಹೆಮ್ಮೆಯ ಮತದಾರ’ ಎನ್ನುವ ಘೋಷಣೆಯ ಸೆಲ್ಫಿ ಬೂತ್ ಪಾಯಿಂಟ್ ಹಾಕಲಾಗಿತ್ತು. ಇದೇ ವೇಳೆ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ‘ನಾನು ಕಡ್ಡಾಯವಾಗಿ ಮತದಾನ ಮಾಡುತ್ತೇನೆ’ ಎಂದು ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಸಹಿ ಹಾಕಿದರು.

ಎಡಿಸಿ ಮೊಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಹೇಮಂತ್, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಬಳ್ಳಾರಿ ತಹಸೀಲ್ದಾರ್ ಗುರುರಾಜ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಮತದಾನ ಜಾಗೃತಿ ಸೈಕಲ್ ಜಾಥಾವು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ-ಕೋಟೆ ಪ್ರದೇಶ(ಶ್ರೀಮೇಧಾ ಕಾಲೇಜು ಮುಂಭಾಗ)-ಮೊದಲನೇ ರೈಲ್ವೇ ಗೇಟ್-ಸುಧಾ ಕ್ರಾಸ್-ಇನ್‍ಫ್ಯಾಂಟರಿ ರಸ್ತೆ-ಎಸ್‍ಪಿ ವೃತ್ತದ ಮೂಲಕ ದುರ್ಗಮ್ಮ ದೇವಸ್ಥಾನದ ಆವರಣಕ್ಕೆ ತಲುಪಿ ಕೊನೆಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ